Advertisement
ಮಾಹಿತಿ

ತಡವಾಗಿ ಬಂದ ಮುಂಗಾರು : ಇಂದಿನಿಂದ “ಮುಂಗಾರು ಮಳೆ” ಯ ವೈಭವ ಶುರುವಂತೆ…!

Share

ಸುಳ್ಯ: ನಿಜವಾದ ಮಳೆಗಾಲ ಇಂದಿನಿಂದ ಶುರುವಾಗುತ್ತದೆ..!. ಹೀಗೆ ಹೇಳಿದಾಗಲೇ ಅನೇಕರು ಈ ಬಾರಿ ಸಂಶಯ ಪಡುತ್ತಾರೆ. ಈ ವರ್ಷ ಮಳೆಗಾಲದ, ಹವಾಮಾನದ ಎಲ್ಲಾ ನಿರೀಕ್ಷೆಗಳೂ ಶೇ.100 ಸರಿಯಾಗಿಲ್ಲ. ಕಾರಣ ಹವಾಮಾನದಲ್ಲಿನ ದಿಢೀರ್ ಏರುಪೇರು.

ಹವಾಮಾನದ ಬದಲಾವಣೆಯ ವೀಕ್ಷಣೆ, ಮಳೆ ಲೆಕ್ಕ, ವಾತಾವರಣ ಬದಲಾವಣೆಯ ವೀಕ್ಷಣೆ ಬಹಳ ಕುತೂಹಲವಾಗಿರುತ್ತದೆ.  ಮಳೆಗಾಲವು ನಿರೀಕ್ಷೆಯಂತೆ ಜೂ.7 ರಂದು ಕೇರಳ ತಲಪಿ ಕರಾವಳಿ ಮೂಲಕ ಜೂ.10 ಕ್ಕೆ ರಾಜ್ಯಕ್ಕೆ ಪ್ರವೇಶ ಮಾಡಬೇಕಾಗಿತ್ತು. ಆದರೆ ತೀರಾ ವಿಳಂಬವಾಗಿಯೂ ಸರಿಯಾಗಿ ಮಳೆಗಾಲ ಆರಂಭವಾಗಿಲ್ಲ. ಕಾರಣ ನೈರುತ್ಯ ಮುಂಗಾರು ಆರಂಭವಾದ ಹೊತ್ತಿನಲ್ಲೇ ವಾಯು ಚಂಡಮಾರುತ ಆರಂಭವಾಯಿತು. ಮುಂಗಾರು ಬಲಕಳೆದುಕೊಂಡಿತು.

Advertisement

ಇದೀಗ ಮಳೆಗಾಲ ತನ್ನ ಮೂಲಸ್ವರೂಪ ಪಡೆದುಕೊಂಡಿದೆ. ಒಂದೆರಡು ಮಳೆ ಜೋರಾಗುತ್ತದೆ. ಮಂಗಳೂರು ಕಾಸರಗೋಡು ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ.
ನಾಳೆಯಿಂದ  24 ರವರೆಗೆ ಮಡಿಕೇರಿ ಹಾಗೂ ಆಗುಂಬೆ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಇಡೀ ದ. ಕ. ಹಾಗೂ ಉಡುಪಿ ಭಾಗಗಳಲ್ಲೂ ಹೆಚ್ಚಿನ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಚಿತ್ರ ಸೂಚಿಸುತ್ತದೆ.

Advertisement

ಈ ಬಾರಿ ಮಳೆಯ ಮುನ್ಸೂಚನೆ ಆಗಾಗ ತಪ್ಪಾಗಿದೆ. ಇದುವರೆಗೆ ಹೀಗೆ ಆಗುತ್ತಿರಲಿಲ್ಲ. ಹವಾಮಾನ ಇಲಾಖೆಯ ಉಪಗ್ರಹ ಆಧಾರಿತ ಚಿತ್ರ ಬಹುತೇಕ ಸರಿಯಾಗಿರುತ್ತಿತ್ತು ಎಂದು  ಹೇಳುತ್ತಾರೆ ಸಾಯಿಶೇಖರ್ ಕರಿಕಳ. ಇದೀಗ ಮಳೆಗಾಲ ಇಂದಿನಿಂದ ಶುರುವಾಗುತ್ತದೆ ಎಂದು ಉಪಗ್ರಹ ಚಿತ್ರ ಹೇಳುತ್ತದೆ ಎಂದು ಅವರು ಹೇಳುತ್ತಾರೆ.

 

Advertisement

ಇನ್ನೊಂದು ಶಾಕಿಂಗ್ ಅಂಶವೆಂದರೆ 1972 ರ ನಂತರ ಅತ್ಯಂತ ವಿಳಂಬವಾಗಿ ಮಳೆ ಬಂದ ವರ್ಷ 2019..!. ಈ ದಾಖಲೆಯನ್ನು  ಬಾಳಿಲದ ಪಿಜಿಎಸ್ ಎನ್ ಪ್ರಸಾದ್ ಹೇಳುತ್ತಾರೆ. ಅವರೇ ಹೇಳುವ ಹಾಗೆ,

 

Advertisement

ನನ್ನ ತಂದೆಯವರ ಡೈರಿಯಲ್ಲಿ ಕಂಡುಬಂದಂತೆ 1972 ರ ಬಳಿಕ (1972 ಜೂನ್ 20) ನಮ್ಮಲ್ಲಿ ಅತ್ಯಂತ ತಡವಾಗಿ (19/06/2019) ಮುಂಗಾರು ಮಳೆ ಆರಂಭವಾದ ವರ್ಷವಿದು. ಅಂದು ಜೂನ್ 20… ಈ ಬಾರಿ 19 ಜೂನ್…!. ಅತ್ಯಂತ ಗೊಂದಲದ ನೈರುತ್ಯ ಮುಂಗಾರು ಈ ಬಾರಿಯದು ಎಂದು ಪ್ರಸಾದ್ ಹೇಳುತ್ತಾರೆ.

Advertisement

 

ಪ್ರಸಾದ್ ಅವರ ಮಳೆ ಲೆಕ್ಕದ ಪ್ರಕಾರ

Advertisement

ವಾಡಿಕೆಗಿಂತ ( ಜೂನ್ 6 ) ತಡವಾಗಿ ಮಳೆಗಾಲ ಆರಂಭವಾದ ವರ್ಷಗಳು… ಹಾಗೂ ಆಯಾ ವರ್ಷ ವಾರ್ಷಿಕವಾಗಿ ಸುರಿದ ಒಟ್ಟು ಮಳೆ ಹೀಗಿದೆ

15/06/1979…. …3579 ಮಿ.ಮೀ
16/06/1983……..5119 ಮಿ.ಮೀ
11/06/1995……..4037 ಮಿ.ಮೀ
10/06/1996……..4562 ಮಿ.ಮೀ
12/06/1997……..4769 ಮಿ.ಮೀ
08/06/1998……..5443 ಮಿ.ಮೀ
10/06/2003……..4046 ಮಿ.ಮೀ
08/06/2005……..4253 ಮಿ.ಮೀ
12/06/2007……..4868 ಮಿ.ಮೀ
08/06/2012……..4314 ಮಿ.ಮೀ
09/06/2014……. 4450 ಮಿ.ಮೀ.
19/06/2019……..????

Advertisement

ಅತ್ಯಂತ ಗೊಂದಲದ ನೈರುತ್ಯ ಮುಂಗಾರು ಈ ಬಾರಿಯದು. ಹವಾಮಾನ ಇಲಾಖೆಯನ್ನೇ ಗೊಂದಲಕ್ಕೀಡು ಮಾಡಿದ ನೈರುತ್ಯ ಮುಂಗಾರು ಮಾರುತ ಈಗ ಸ್ವಲ್ಪ ಮಟ್ಟಿನ ವೇಗ ಪಡಕೊಂಡಂತಿದೆ. ಮುಂದಿನ ಬೆಳವಣಿಗೆ ಏನು ಗೊತ್ತಿಲ್ಲ…!

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

21 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

23 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago