ಜಿಲ್ಲೆ

ತಡೆಯಾಜ್ಞೆ ಇದ್ದರೂ ಕಾಮಗಾರಿ ಮುಂದುವರಿಕೆ – ಆರೋಪ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಡಬ: ಐತ್ತೂರು ಗ್ರಾಮದ ಮಂಡೆಕರ ಎಂಬಲ್ಲಿ  ನ್ಯಾಯಾಲಯ ತಡೆಯಾಜ್ಞೆ ನೀಡಿದರೂ ಕೆ.ಎಫ್.ಡಿ.ಸಿಯವರು ಕಾಮಗಾರಿ ನಡೆಸಿದ್ದು ಈ ಬಗ್ಗೆ ಇಲಾಖೆಯ ವಿರುದ್ದ ನ್ಯಾಯಾಲಯ ನಿಂದನೆ ಪ್ರಕರಣ ದಾಖಲಾಗಿದೆ. ಇದೂ ಅಲ್ಲದೆ ಕೆ.ಎಫ್.ಡಿ.ಸಿ.ಯವರು ನನಗೆ ವೃಥಾ ಕಿರುಕುಳ ನೀಡಿ ಸಾಕ್ಷಿ ನಾಶಕ್ಕೆ ಯತ್ನಿಸುತ್ತಿದ್ದಾರೆ, ಈ ಬಗ್ಗೆ ಹೈಕೋರ್ಟ್‍ನಲ್ಲಿ ದಾವೆ ಹೂಡುವುದಾಗಿ ನಾಗಪ್ಪ ಮಂಡೆಕರ ಹೇಳಿದ್ದಾರೆ.

Advertisement
Advertisement

ಅವರು ಬುಧವಾರ ಕಡಬದಲ್ಲಿ ಸುದ್ದಿಗೋಷ್ಟಿಯಲ್ಲಿ  ಮಾತನಾಡಿದರು.ಸರಕಾರಿ ಜಾಗದಲ್ಲಿ ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮದವರು ರಬ್ಬರ್ ಪ್ಲಾಂಟೆಷನ್, ವಿದ್ಯುತ್ ಬೇಲಿ ನಿರ್ಮಾಣ ಮಾಡಿದ್ದಾರೆ, ಪ್ಲಾಂಟೆಷನ್ ನಿರ್ಮಾಣದ ಮೊದಲೇ ನ್ಯಾಯಾಲಯ ತಡೆಯಾಜ್ಞೆ ನೀಡಿದರೂ ಕಾಮಗಾರಿ ನಡೆಸುತ್ತಿದ್ದಾರೆ. ನನ್ನ ಮನೆಗೆ ಹೋಗಲು ಇಲ್ಲಿ ರಸ್ತೆ ಇದ್ದು ಈ ರಸ್ತೆಯನ್ನು ಕರ್ನಾಟಕ ಅಭಿವೃದ್ದಿ ನಿಗಮ(ಕೆ.ಎಫ್.ಡಿ.ಸಿಯವರು) ಮುಚ್ಚಲು ಯತ್ನಿಸಿ ಅದರ ಜಾಗದಲ್ಲಿ ಬಲತ್ಕಾರವಾಗಿ ರಬ್ಬರ್ ಗಿಡಗಳನ್ನು ನೆಟ್ಟಿದ್ದಾರೆ, ಅಲ್ಲದೆ ಆ ಜಾಗದ ಸುತ್ತಲೂ ವಿದ್ಯುತ್ ಬೇಲಿ ನಿರ್ಮಾಣ ಮಾಡಿದ್ದಾರೆ, ಇದರಿಂದ ನಮಗೆ ಮನೆಯಿಂದ ಹೊರ ಹೋಗಲು ಆಗದಂತ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ. ಈ ಹಿಂದೆ ರಬ್ಬರ್ ಗಿಡ ನೆಡಲು ಪ್ರಯತ್ನಿಸುತ್ತಿದ್ದಾಗ ನಾನು ಅವರ ವಿರುದ್ದ ಪುತ್ತೂರು ನ್ಯಾಯಾಲಯದಲ್ಲಿ ದಾವೆ ದಾಖಲಿಸಿದ್ದು ಈ ಬಗ್ಗೆ ನ್ಯಾಯಾಲಯವು ಕೆ.ಎಫ್.ಡಿ.ಸಿಯ ವಿರುದ್ದ ರಸ್ತೆಯನ್ನು ಮುಚ್ಚದಂತೆ ನಿರ್ಬಂಧಾಜ್ಞೆ ನೀಡಿರುತ್ತದೆ, ಹೀಗಿದ್ದರೂ ಬಳಿಕ ಕೆ.ಎಫ್.ಡಿ.ಸಿಯ ಅಧಿಕಾರಿಗಳು ಬಲತ್ಕಾರವಾಗಿ ತಂತಿ ಬೇಲಿ ಹಾಕಿ ಹಾಲಿ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿರುತ್ತಾರೆ, ಅಲ್ಲದೆ ಆ ರಸ್ತೆಯಲ್ಲಿ ಹೋಗಲು ಅಡ್ಡಿಪಡಿಸುತ್ತಿದ್ದಾರೆ. ಇದರಿಂದ ನನಗೆ ಹಾಗೂ ನನ್ನ ಕುಟುಂಬದವರಿಗೆ ತೊಂದರೆಯಾಗಿದೆ ಎಂದು  ನಾಗಪ್ಪ ಅವರು ಹೇಳಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

12 hours ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

22 hours ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

22 hours ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

23 hours ago

ಮಲೆನಾಡು-ಕರಾವಳಿ ಜಿಲ್ಲೆಯಲ್ಲಿ ಇಂದೂ ಮಳೆ | ರೆಡ್ ಎಲರ್ಟ್

ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು  ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…

1 day ago

ಮತ್ತದೇ ಬೇಸರ ಕಳೆಯಲು ಈ ಹಿತವಾದ ಮಳೆ | ಹಾಡಷ್ಟೇ ಅಲ್ಲ, ಈ ಅಭಿನಯ ನೋಡಲೇಬೇಕು…

ಮುಂಗಾರು ಮಳೆ ಆರಂಭವಾಯಿತು. ಈ ಬಾರಿ ನಿರೀಕ್ಷೆಗೂ ಮುನ್ನವೇ ಮುಂಗಾರು ಬಂದಿದೆ. ಮುಂಗಾರು…

1 day ago