( ಸಾಂದರ್ಭಿಕ ಚಿತ್ರ )
ಕಡಬ: ಐತ್ತೂರು ಗ್ರಾಮದ ಮಂಡೆಕರ ಎಂಬಲ್ಲಿ ನ್ಯಾಯಾಲಯ ತಡೆಯಾಜ್ಞೆ ನೀಡಿದರೂ ಕೆ.ಎಫ್.ಡಿ.ಸಿಯವರು ಕಾಮಗಾರಿ ನಡೆಸಿದ್ದು ಈ ಬಗ್ಗೆ ಇಲಾಖೆಯ ವಿರುದ್ದ ನ್ಯಾಯಾಲಯ ನಿಂದನೆ ಪ್ರಕರಣ ದಾಖಲಾಗಿದೆ. ಇದೂ ಅಲ್ಲದೆ ಕೆ.ಎಫ್.ಡಿ.ಸಿ.ಯವರು ನನಗೆ ವೃಥಾ ಕಿರುಕುಳ ನೀಡಿ ಸಾಕ್ಷಿ ನಾಶಕ್ಕೆ ಯತ್ನಿಸುತ್ತಿದ್ದಾರೆ, ಈ ಬಗ್ಗೆ ಹೈಕೋರ್ಟ್ನಲ್ಲಿ ದಾವೆ ಹೂಡುವುದಾಗಿ ನಾಗಪ್ಪ ಮಂಡೆಕರ ಹೇಳಿದ್ದಾರೆ.
ಅವರು ಬುಧವಾರ ಕಡಬದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.ಸರಕಾರಿ ಜಾಗದಲ್ಲಿ ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮದವರು ರಬ್ಬರ್ ಪ್ಲಾಂಟೆಷನ್, ವಿದ್ಯುತ್ ಬೇಲಿ ನಿರ್ಮಾಣ ಮಾಡಿದ್ದಾರೆ, ಪ್ಲಾಂಟೆಷನ್ ನಿರ್ಮಾಣದ ಮೊದಲೇ ನ್ಯಾಯಾಲಯ ತಡೆಯಾಜ್ಞೆ ನೀಡಿದರೂ ಕಾಮಗಾರಿ ನಡೆಸುತ್ತಿದ್ದಾರೆ. ನನ್ನ ಮನೆಗೆ ಹೋಗಲು ಇಲ್ಲಿ ರಸ್ತೆ ಇದ್ದು ಈ ರಸ್ತೆಯನ್ನು ಕರ್ನಾಟಕ ಅಭಿವೃದ್ದಿ ನಿಗಮ(ಕೆ.ಎಫ್.ಡಿ.ಸಿಯವರು) ಮುಚ್ಚಲು ಯತ್ನಿಸಿ ಅದರ ಜಾಗದಲ್ಲಿ ಬಲತ್ಕಾರವಾಗಿ ರಬ್ಬರ್ ಗಿಡಗಳನ್ನು ನೆಟ್ಟಿದ್ದಾರೆ, ಅಲ್ಲದೆ ಆ ಜಾಗದ ಸುತ್ತಲೂ ವಿದ್ಯುತ್ ಬೇಲಿ ನಿರ್ಮಾಣ ಮಾಡಿದ್ದಾರೆ, ಇದರಿಂದ ನಮಗೆ ಮನೆಯಿಂದ ಹೊರ ಹೋಗಲು ಆಗದಂತ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ. ಈ ಹಿಂದೆ ರಬ್ಬರ್ ಗಿಡ ನೆಡಲು ಪ್ರಯತ್ನಿಸುತ್ತಿದ್ದಾಗ ನಾನು ಅವರ ವಿರುದ್ದ ಪುತ್ತೂರು ನ್ಯಾಯಾಲಯದಲ್ಲಿ ದಾವೆ ದಾಖಲಿಸಿದ್ದು ಈ ಬಗ್ಗೆ ನ್ಯಾಯಾಲಯವು ಕೆ.ಎಫ್.ಡಿ.ಸಿಯ ವಿರುದ್ದ ರಸ್ತೆಯನ್ನು ಮುಚ್ಚದಂತೆ ನಿರ್ಬಂಧಾಜ್ಞೆ ನೀಡಿರುತ್ತದೆ, ಹೀಗಿದ್ದರೂ ಬಳಿಕ ಕೆ.ಎಫ್.ಡಿ.ಸಿಯ ಅಧಿಕಾರಿಗಳು ಬಲತ್ಕಾರವಾಗಿ ತಂತಿ ಬೇಲಿ ಹಾಕಿ ಹಾಲಿ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿರುತ್ತಾರೆ, ಅಲ್ಲದೆ ಆ ರಸ್ತೆಯಲ್ಲಿ ಹೋಗಲು ಅಡ್ಡಿಪಡಿಸುತ್ತಿದ್ದಾರೆ. ಇದರಿಂದ ನನಗೆ ಹಾಗೂ ನನ್ನ ಕುಟುಂಬದವರಿಗೆ ತೊಂದರೆಯಾಗಿದೆ ಎಂದು ನಾಗಪ್ಪ ಅವರು ಹೇಳಿದರು.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…