Advertisement
ಜಿಲ್ಲೆ

ತಡೆಯಾಜ್ಞೆ ಇದ್ದರೂ ಕಾಮಗಾರಿ ಮುಂದುವರಿಕೆ – ಆರೋಪ

Share

ಕಡಬ: ಐತ್ತೂರು ಗ್ರಾಮದ ಮಂಡೆಕರ ಎಂಬಲ್ಲಿ  ನ್ಯಾಯಾಲಯ ತಡೆಯಾಜ್ಞೆ ನೀಡಿದರೂ ಕೆ.ಎಫ್.ಡಿ.ಸಿಯವರು ಕಾಮಗಾರಿ ನಡೆಸಿದ್ದು ಈ ಬಗ್ಗೆ ಇಲಾಖೆಯ ವಿರುದ್ದ ನ್ಯಾಯಾಲಯ ನಿಂದನೆ ಪ್ರಕರಣ ದಾಖಲಾಗಿದೆ. ಇದೂ ಅಲ್ಲದೆ ಕೆ.ಎಫ್.ಡಿ.ಸಿ.ಯವರು ನನಗೆ ವೃಥಾ ಕಿರುಕುಳ ನೀಡಿ ಸಾಕ್ಷಿ ನಾಶಕ್ಕೆ ಯತ್ನಿಸುತ್ತಿದ್ದಾರೆ, ಈ ಬಗ್ಗೆ ಹೈಕೋರ್ಟ್‍ನಲ್ಲಿ ದಾವೆ ಹೂಡುವುದಾಗಿ ನಾಗಪ್ಪ ಮಂಡೆಕರ ಹೇಳಿದ್ದಾರೆ.

ಅವರು ಬುಧವಾರ ಕಡಬದಲ್ಲಿ ಸುದ್ದಿಗೋಷ್ಟಿಯಲ್ಲಿ  ಮಾತನಾಡಿದರು.ಸರಕಾರಿ ಜಾಗದಲ್ಲಿ ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮದವರು ರಬ್ಬರ್ ಪ್ಲಾಂಟೆಷನ್, ವಿದ್ಯುತ್ ಬೇಲಿ ನಿರ್ಮಾಣ ಮಾಡಿದ್ದಾರೆ, ಪ್ಲಾಂಟೆಷನ್ ನಿರ್ಮಾಣದ ಮೊದಲೇ ನ್ಯಾಯಾಲಯ ತಡೆಯಾಜ್ಞೆ ನೀಡಿದರೂ ಕಾಮಗಾರಿ ನಡೆಸುತ್ತಿದ್ದಾರೆ. ನನ್ನ ಮನೆಗೆ ಹೋಗಲು ಇಲ್ಲಿ ರಸ್ತೆ ಇದ್ದು ಈ ರಸ್ತೆಯನ್ನು ಕರ್ನಾಟಕ ಅಭಿವೃದ್ದಿ ನಿಗಮ(ಕೆ.ಎಫ್.ಡಿ.ಸಿಯವರು) ಮುಚ್ಚಲು ಯತ್ನಿಸಿ ಅದರ ಜಾಗದಲ್ಲಿ ಬಲತ್ಕಾರವಾಗಿ ರಬ್ಬರ್ ಗಿಡಗಳನ್ನು ನೆಟ್ಟಿದ್ದಾರೆ, ಅಲ್ಲದೆ ಆ ಜಾಗದ ಸುತ್ತಲೂ ವಿದ್ಯುತ್ ಬೇಲಿ ನಿರ್ಮಾಣ ಮಾಡಿದ್ದಾರೆ, ಇದರಿಂದ ನಮಗೆ ಮನೆಯಿಂದ ಹೊರ ಹೋಗಲು ಆಗದಂತ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ. ಈ ಹಿಂದೆ ರಬ್ಬರ್ ಗಿಡ ನೆಡಲು ಪ್ರಯತ್ನಿಸುತ್ತಿದ್ದಾಗ ನಾನು ಅವರ ವಿರುದ್ದ ಪುತ್ತೂರು ನ್ಯಾಯಾಲಯದಲ್ಲಿ ದಾವೆ ದಾಖಲಿಸಿದ್ದು ಈ ಬಗ್ಗೆ ನ್ಯಾಯಾಲಯವು ಕೆ.ಎಫ್.ಡಿ.ಸಿಯ ವಿರುದ್ದ ರಸ್ತೆಯನ್ನು ಮುಚ್ಚದಂತೆ ನಿರ್ಬಂಧಾಜ್ಞೆ ನೀಡಿರುತ್ತದೆ, ಹೀಗಿದ್ದರೂ ಬಳಿಕ ಕೆ.ಎಫ್.ಡಿ.ಸಿಯ ಅಧಿಕಾರಿಗಳು ಬಲತ್ಕಾರವಾಗಿ ತಂತಿ ಬೇಲಿ ಹಾಕಿ ಹಾಲಿ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿರುತ್ತಾರೆ, ಅಲ್ಲದೆ ಆ ರಸ್ತೆಯಲ್ಲಿ ಹೋಗಲು ಅಡ್ಡಿಪಡಿಸುತ್ತಿದ್ದಾರೆ. ಇದರಿಂದ ನನಗೆ ಹಾಗೂ ನನ್ನ ಕುಟುಂಬದವರಿಗೆ ತೊಂದರೆಯಾಗಿದೆ ಎಂದು  ನಾಗಪ್ಪ ಅವರು ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

11 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

11 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

11 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

11 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

1 day ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago