Advertisement
ಜಿಲ್ಲೆ

ತಡೆಯಾಜ್ಞೆ ಇದ್ದರೂ ಕಾಮಗಾರಿ ಮುಂದುವರಿಕೆ – ಆರೋಪ

Share

ಕಡಬ: ಐತ್ತೂರು ಗ್ರಾಮದ ಮಂಡೆಕರ ಎಂಬಲ್ಲಿ  ನ್ಯಾಯಾಲಯ ತಡೆಯಾಜ್ಞೆ ನೀಡಿದರೂ ಕೆ.ಎಫ್.ಡಿ.ಸಿಯವರು ಕಾಮಗಾರಿ ನಡೆಸಿದ್ದು ಈ ಬಗ್ಗೆ ಇಲಾಖೆಯ ವಿರುದ್ದ ನ್ಯಾಯಾಲಯ ನಿಂದನೆ ಪ್ರಕರಣ ದಾಖಲಾಗಿದೆ. ಇದೂ ಅಲ್ಲದೆ ಕೆ.ಎಫ್.ಡಿ.ಸಿ.ಯವರು ನನಗೆ ವೃಥಾ ಕಿರುಕುಳ ನೀಡಿ ಸಾಕ್ಷಿ ನಾಶಕ್ಕೆ ಯತ್ನಿಸುತ್ತಿದ್ದಾರೆ, ಈ ಬಗ್ಗೆ ಹೈಕೋರ್ಟ್‍ನಲ್ಲಿ ದಾವೆ ಹೂಡುವುದಾಗಿ ನಾಗಪ್ಪ ಮಂಡೆಕರ ಹೇಳಿದ್ದಾರೆ.

ಅವರು ಬುಧವಾರ ಕಡಬದಲ್ಲಿ ಸುದ್ದಿಗೋಷ್ಟಿಯಲ್ಲಿ  ಮಾತನಾಡಿದರು.ಸರಕಾರಿ ಜಾಗದಲ್ಲಿ ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮದವರು ರಬ್ಬರ್ ಪ್ಲಾಂಟೆಷನ್, ವಿದ್ಯುತ್ ಬೇಲಿ ನಿರ್ಮಾಣ ಮಾಡಿದ್ದಾರೆ, ಪ್ಲಾಂಟೆಷನ್ ನಿರ್ಮಾಣದ ಮೊದಲೇ ನ್ಯಾಯಾಲಯ ತಡೆಯಾಜ್ಞೆ ನೀಡಿದರೂ ಕಾಮಗಾರಿ ನಡೆಸುತ್ತಿದ್ದಾರೆ. ನನ್ನ ಮನೆಗೆ ಹೋಗಲು ಇಲ್ಲಿ ರಸ್ತೆ ಇದ್ದು ಈ ರಸ್ತೆಯನ್ನು ಕರ್ನಾಟಕ ಅಭಿವೃದ್ದಿ ನಿಗಮ(ಕೆ.ಎಫ್.ಡಿ.ಸಿಯವರು) ಮುಚ್ಚಲು ಯತ್ನಿಸಿ ಅದರ ಜಾಗದಲ್ಲಿ ಬಲತ್ಕಾರವಾಗಿ ರಬ್ಬರ್ ಗಿಡಗಳನ್ನು ನೆಟ್ಟಿದ್ದಾರೆ, ಅಲ್ಲದೆ ಆ ಜಾಗದ ಸುತ್ತಲೂ ವಿದ್ಯುತ್ ಬೇಲಿ ನಿರ್ಮಾಣ ಮಾಡಿದ್ದಾರೆ, ಇದರಿಂದ ನಮಗೆ ಮನೆಯಿಂದ ಹೊರ ಹೋಗಲು ಆಗದಂತ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ. ಈ ಹಿಂದೆ ರಬ್ಬರ್ ಗಿಡ ನೆಡಲು ಪ್ರಯತ್ನಿಸುತ್ತಿದ್ದಾಗ ನಾನು ಅವರ ವಿರುದ್ದ ಪುತ್ತೂರು ನ್ಯಾಯಾಲಯದಲ್ಲಿ ದಾವೆ ದಾಖಲಿಸಿದ್ದು ಈ ಬಗ್ಗೆ ನ್ಯಾಯಾಲಯವು ಕೆ.ಎಫ್.ಡಿ.ಸಿಯ ವಿರುದ್ದ ರಸ್ತೆಯನ್ನು ಮುಚ್ಚದಂತೆ ನಿರ್ಬಂಧಾಜ್ಞೆ ನೀಡಿರುತ್ತದೆ, ಹೀಗಿದ್ದರೂ ಬಳಿಕ ಕೆ.ಎಫ್.ಡಿ.ಸಿಯ ಅಧಿಕಾರಿಗಳು ಬಲತ್ಕಾರವಾಗಿ ತಂತಿ ಬೇಲಿ ಹಾಕಿ ಹಾಲಿ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿರುತ್ತಾರೆ, ಅಲ್ಲದೆ ಆ ರಸ್ತೆಯಲ್ಲಿ ಹೋಗಲು ಅಡ್ಡಿಪಡಿಸುತ್ತಿದ್ದಾರೆ. ಇದರಿಂದ ನನಗೆ ಹಾಗೂ ನನ್ನ ಕುಟುಂಬದವರಿಗೆ ತೊಂದರೆಯಾಗಿದೆ ಎಂದು  ನಾಗಪ್ಪ ಅವರು ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

2 hours ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

4 hours ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

14 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

14 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

1 day ago