(ಅಂಗಾರ ಮತ್ತು ಬಿಜೆಪಿ ಮುಖಂಡರು ಬೆಂಗಳೂರಿನ ಶಾಸಕರ ಭವನದಲ್ಲಿ.)
ಸುಳ್ಯ: ನಿರಂತರ ಆರು ಬಾರಿ ಶಾಸಕರಾಗಿ ಆಯ್ಕೆಯಾದರೂ ಶಾಸಕ ಎಸ್.ಅಂಗಾರರಿಗೆ ಸಚಿವ ಸ್ಥಾನ ತಪ್ಪಿಸರುವುದರ ವಿರುದ್ಧ ವಿವಿಧ ಭಾಗಗಳಿಂದ ತೀವ್ರ ಅಸಮಾಧಾನ, ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ಮುಖಂಡರು, ಕಾರ್ಯಕರ್ತರು ಮಾತ್ರವಲ್ಲದೆ ಜೆಡಿಎಸ್, ಕಾಂಗ್ರೆಸ್, ಆಮ್ ಆದ್ಮಿ ಪಾರ್ಟಿ ಸೇರಿದಂತೆ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ಮತ್ತು ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ವಿಚಾರದಲ್ಲಿ ಸುಳ್ಯದ ಜನತೆ ಒಕ್ಕೊರಲಿಂದ ಬೇಡಿಕೆ ಇಟ್ಟಿರುವುದಲ್ಲದೆ ಪಕ್ಷಗಳು ಕೂಡ ಬಲು ಅಪರೂಪದ ರಾಜಕೀಯ ಐಕ್ಯತೆಯನ್ನು ತೋರ್ಪಡಿಸಿದೆ. ಅಂಗಾರ ಸಚಿವರಾಗುವವರೆಗೆ ಪಕ್ಷದ ಎಲ್ಲಾ ಚಟುವಟಿಕೆಗಳನ್ನೂ ಸ್ಥಗಿತ ಮಾಡುವುದಾಗಿ ಬಿಜೆಪಿ ಘೋಷಿಸಿದರೆ, ರಾಜಕೀಯ ಭಿನ್ನಾಭಿಪ್ರಾಯ ಇದ್ದರೂ ಈ ವಿಚಾರದಲ್ಲಿ ಪಕ್ಷದ ಧ್ವಜವನ್ನು ಮನೆಯಲ್ಲಿಟ್ಟು ಎಲ್ಲರ ಜೊತೆ ಸೇರಿ ಬೀದಿಗಿಳಿದು ಹೋರಾಟ ಮಾಡುವುದಾಗಿ ಜೆಡಿಎಸ್ ಘೋಷಿಸಿದೆ. ಸಚಿವ ಸ್ಥಾನ ನೀಡದ ಬಗ್ಗೆ ಕಾಂಗ್ರೆಸ್, ಆಮ್ ಆದ್ಮಿ ಪಾರ್ಟಿ ಮುಖಂಡರು ಕಟುವಾಗಿ ಟೀಕಿಸಿದ್ದಾರೆ. ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಕೂಡ ಸಾರ್ವಜನಿಕವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾಳೆ ನಿರ್ಣಾಯಕ ತೀರ್ಮಾನ: ಬುಧವಾರ ಬೆಳಿಗ್ಗೆ ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆಯುವ ಬಿಜೆಪಿ ಸಭೆಯಲ್ಲಿ ನಿರ್ಣಾಯಕ ತೀರ್ಮಾನ ಪ್ರಕಟಿಸುವ ಸಾಧ್ಯತೆ ಇದೆ.
ಬಿಜೆಪಿಯ ಎಲ್ಲಾ ಪದಾಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಾಮೂಹಿಕವಾಗಿ ರಾಜಿನಾಮೆ ಘೋಷಿಸುವುದು ಸೇರಿದಂತೆ ಕಠಿಣ ನಿರ್ಧಾರ ಕೈಗೊಳ್ಳುವ ಸೂಚನೆಯನ್ನು ಬಿಜೆಪಿ ನೀಡಿದೆ. ಅಲ್ಲದೆ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆಯೂ ಚಿಂತನೆ ನಡೆದಿದೆ ಎಂದು ಮೂಲಗಳು ತಿಳಿಸಿದೆ.
ಸುಳ್ಯ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಎಲ್ಲ ಜನಪ್ರತಿನಿಧಿಗಳು, ಗ್ರಾಮ ಪಂಚಾಯತ್ ಸಮಿತಿ ಅಧ್ಯಕ್ಷ , ಉಪಾಧ್ಯಕ್ಷರ ಮೇಲ್ಪಟ್ಟ ಶಕ್ತಿಕೇಂದ್ರ, ಮಹಾಶಕ್ತಿಕೇಂದ್ರ, ಮಂಡಲ ಮಟ್ಟದ,ಜಿಲ್ಲಾಮಟ್ಟದ, ವಿವಿಧ ಮೋರ್ಚಾಗಳ ಎಲ್ಲಾ ಪದಾಧಿಕಾರಿಗಳ ಹಾಗೂ ಹಿರಿಯ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸುವಂತೆ ಮಂಡಲ ಸಮಿತಿ ಸೂಚನೆ ನೀಡಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…