ತಲಕಾವೇರಿ: ತಲಕಾವೇರಿ ತೀರ್ಥೋದ್ಭವ ಶುಕ್ರವಾರ ಮುಂಜಾನೆ 12.57 ಕ್ಕೆ ನಡೆಯಿತು. ಮೊದಲು ನಿಶ್ಚಯವಾದ ಸಮಯಕ್ಕಿಂತ ಎರಡು ನಿಮಿಷ ಮೊದಲು ಅಂದರೆ 12.57 ರ ಕರ್ಕಾಟಕ ಲಗ್ನ ರೋಹಿಣಿ ನಕ್ಷತ್ರದಲ್ಲಿ ಬ್ರಹ್ಮಗಿರಿಯ ಬ್ರಹ್ಮ ಕುಂಡಿಕೆಯಿಂದ ಕಾವೇರಿ ನದಿ ಉದ್ಭವಿಸಿ ತೀರ್ಥ ರೂಪಿಣಿಯಾಗಿ ಹರಿದು ಭಕ್ತರಿಗೆ ದರ್ಶನ ನೀಡಿದಳು. ತೀರ್ಥೋದ್ಭವದ ಬಳಿಕ ನೆರೆದ ಸಾವಿರಾರು ಮಂದಿ ಭಕ್ತರು ಕೊಳದಲ್ಲಿ ಪುಣ್ಯ ಸ್ನಾನ ಮಾಡಿದರು. ಕಾವೇರಿ ತೀರ್ಥವನ್ನು ಸಾವಿರಾರು ಮಂದಿ ಕೊಡಗಳಲ್ಲಿ ಸಂಗ್ರಹಿಸಿದರು. ತಡ ರಾತ್ರಿ ತೀರ್ಥೋದ್ಭವ ನಡೆದರೂ ಕರ್ನಾಟಕ, ಕೇರಳ, ತಮಿಳು ನಾಡು ಮತ್ತು ಆಂಧ್ರ ಪ್ರದೇಶದಿಂದ ಸಾವಿರಾರು ಮಂದಿ ಭಕ್ತರು ಆಗಮಿಸಿದ್ದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…