ಸುಳ್ಯ: ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಅವರಿಗೆ ವಿರಾಜಪೇಟೆ ತಹಶೀಲ್ದಾರ್ ಆಗಿ ವರ್ಗಾವಣೆ ಆಗಿದೆ ಎಂದು ತಿಳಿದು ಬಂದಿದೆ. ವರ್ಗಾವಣೆ ಆಗಿದೆ ಎಂಬ ಮಾಹಿತಿ ಇದೆ.
ಅಧಿಕೃತ ಆದೇಶ ಇನ್ನೂ ಕೈ ಸೇರಿಲ್ಲ ಎಂದು ಕುಂಞಿ ಅಹಮ್ಮದ್ ಪ್ರತಿಕ್ರಿಯಿಸಿದ್ದಾರೆ. ಕಳೆದ ಫೆಬ್ರುವರಿ ತಿಂಗಳಲ್ಲಿ ಸುಳ್ಯ ತಹಶೀಲ್ದಾರ್ ಆಗಿ ಅಧಿಕಾರ ವಹಿಸಿಕೊಂಡ ಕುಂಞಿ ಅಹಮ್ಮದ್ ಜನಪರ ಅಧಿಕಾರಿ ಎಂದು ಹೆಸರು ಗಳಿಸಿದ್ದರು. ಕಳೆದ ಜುಲೈ ತಿಂಗಳಲ್ಲಿ ಇವರಿಗೆ ಒಮ್ಮೆ ವರ್ಗಾವಣೆ ಆದೇಶ ಬಂದಿತ್ತು. ಇದಕ್ಕೆ ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಬಳಿಕ ಸರಕಾರ ಬದಲಾದ ಕಾರಣ ಇವರ ವರ್ಗಾವಣೆ ಆದೇಶಕ್ಕೆ ತಡೆ ಬಿದ್ದಿತ್ತು. ಇದೀಗ ಮತ್ತೆ ವರ್ಗಾವಣೆ ಆಗಿದೆ ಎಂಬ ಮಾಹಿತಿ ಬಂದಿದೆ. ಅಧಿಕಾರ ವಹಿಸಿ ಒಂದು ವರ್ಷ ಆಗುವ ಮುನ್ನವೇ ಎರಡನೇ ಬಾರಿಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿ ಹರಿದಾಡುತ್ತಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…