Advertisement
ಸುದ್ದಿಗಳು

ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ

Share

ಸುಳ್ಯ:ಪ್ರೌಢಶಾಲಾ ಮಟ್ಟದ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಉದ್ಘಾಟಿಸಿದರು. ನರೇಗಾ ಅಡಿಯಲ್ಲಿ ಐವತ್ತು ಸಾವಿರ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಕಬಡ್ಡಿ ಕ್ರೀಡಾಂಗಣವನ್ನು ತಾಲೂಕು ಪಂಚಾಯತ್ ಸದಸ್ಯೆ ಯಶೋಧಾ ಬಾಳೆಗುಡ್ಡೆ ಉದ್ಘಾಟಿಸಿದರು.
ಕ್ಷೇತ್ರ ಶಿಕ್ಷ ಣಾಧಿಕಾರಿ ಎಸ್.ಪಿ. ಮಹಾದೇವ, ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ ,ದೇವಚಳ್ಳ ಗ್ರಾಪಂ ಸದಸ್ಯರಾದ ಶೈಲೇಶ್ ಅಂಬೆಕಲ್ಲು, ಕೃಷ್ಣಯ್ಯ ಮೂಲೆ ತೋಟ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ವೀಣಾ ಎಂ.ಟಿ, ದೇವಚಳ್ಳ ಗ್ರಾ.ಪಂ.ಪಿಡಿಒ ಕಾವ್ಯ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಗಣೇಶ್. ಪಿ , ಸಹದೇವ, ಸೂಫಿ ಪೆರಾಜೆ ಮುಖ್ಯ ಅತಿಥಿಗಳಾಗಿದ್ದರು. ಎಲಿಮಲೆ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರ ಪೇರಾಲು ಸ್ವಾಗತಿಸಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಲಕ್ಷ್ಮೀಶ ರೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ತಿರುಮಲೇಶ್ವರಿ. ಯು.ಎಸ್. ವಂದಿಸಿದರು. ಶಿಕ್ಷಕ ಗೋಪಿನಾಥ ಎಂ ಕಾರ್ಯಕ್ರಮ ನಿರೂಪಿಸಿದರು.

ಎಣ್ಮೂರು ಪ್ರೌಢಶಾಲೆ, ಜ್ನಾನದೀಪ ಎಲಿಮಲೆ ವಿಜೇತರು: ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಸರಕಾರಿ ಪ್ರೌಢಶಾಲೆ ಎಣ್ಮೂರು ಹಾಗೂ ದ್ವಿತೀಯ ಸ್ಥಾನವನ್ನು ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲ ಪಡೆದುಕೊಂಡಿತು. ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆ ಹಾಗೂ ದ್ವಿತೀಯ ಸ್ಥಾನವನ್ನು ಸರಕಾರಿ ಪ್ರೌಢಶಾಲೆ ಎಣ್ಮೂರು ಪಡೆದುಕೊಂಡಿತು. ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು .

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ

ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…

14 minutes ago

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

5 hours ago

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

15 hours ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

15 hours ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

16 hours ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

22 hours ago