Advertisement
ಸುದ್ದಿಗಳು

ತಾ.ಪಂ.ಉಪಾಧ್ಯಕ್ಷರ ಮೇಲೆ ಅವಹೇಳನಕಾರಿ ಪ್ರಚಾರಕ್ಕೆ ಕ್ರಮ ಇಲ್ಲ- ತಾ.ಪಂ.ಸಭೆಯಲ್ಲಿ ಆಕ್ರೋಶ

Share

ಸುಳ್ಯ: ಸುಳ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್ ರೈ ಅವರ ಮೇಲೆ ಮಾನಹಾನಿಕರವಾದ ಸಂದೇಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದವರ ಮೇಲೆ ಮತ್ತು ಭಿತ್ತಿ ಪತ್ರ ಮತ್ತು ಕರಪತ್ರಗಳ ಮೂಲಕ ಅಪಪ್ರಚಾರ ಮಾಡಿದವರ ಮೇಲೆ ಪೊಲೀಸ್‌ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಾಲೂಕು ಪಂಚಾಯತ್ ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಯಿತು.

ತಾ.ಪಂ.ಅಧ್ಯಕ್ಷ ಚನಿಯ ಅಧ್ಯಕ್ಷತೆಯಲ್ಲಿ ನಡೆದ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಜನ ಪ್ರತಿನಿಧಿಯ ಮೇಲೆ ಈ ರೀತಿ ಮಾಡಿದವರ ವಿರುದ್ಧ  ಸೈಬರ್ ದಾಳಿ ಮತ್ತು ಭಿತ್ತಿ ಪತ್ರ ಹರಡಿದವರ ಮೇಲೆ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು. ಪ್ರಭಾವಿಗಳ ಒತ್ತಡಕ್ಕೆ ಮಣಿದು ಪೊಲೀಸ್ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು. ಈ ಕುರಿತು ಚರ್ಚೆ ನಡೆದು ಒಂದು ವಾರದಲ್ಲಿ ತನಿಖೆಯ ಪ್ರಗತಿಯ ವರದಿಯನ್ನು ತಾ.ಪಂ.ಅಧ್ಯಕ್ಷರಿಗೆ ಸಲ್ಲಿಸಲು ಮತ್ತು ಅಪಪ್ರಚಾರ ಹರಡಿದವರ ಮೇಲೆ ಸೂಕ್ತ ಕ್ರಮಕ್ಕೆ ಸಭೆ ಸೂಚಿಸಿತು. ಈ ವಿಷಯವನ್ನು ಪ್ರಕರಣದ ತನಿಖೆ ನಡೆಸುವ ಅಧಿಕಾರಿಯ ಗಮನಕ್ಕೆ ತರುವುದಾಗಿ ಸುಳ್ಯ ಎಸ್.ಐ ಸಭೆಗೆ ತಿಳಿಸಿದರು.
ವಿವಿಧ ಸಮಸ್ಯೆಗಳ ಬಗ್ಗೆ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ನಡೆಯಿತು.
ಉಪಾಧ್ಯಕ್ಷೆ ಶುಭದಾ ಎಸ್.ರೈ, ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ತಾ.ಪಂ.ಸಹಾಯಕ ನಿರ್ದೇಶಕ ಭವಾನಿಶಂಕರ, ಜಿ.ಪಂ.ಸದಸ್ಯರು, ತಾ.ಪಂ.ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

6 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago