Advertisement
ಸುದ್ದಿಗಳು

ತಾ.ಪಂ.ಉಪಾಧ್ಯಕ್ಷರ ಮೇಲೆ ಅವಹೇಳನಕಾರಿ ಪ್ರಚಾರಕ್ಕೆ ಕ್ರಮ ಇಲ್ಲ- ತಾ.ಪಂ.ಸಭೆಯಲ್ಲಿ ಆಕ್ರೋಶ

Share

ಸುಳ್ಯ: ಸುಳ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್ ರೈ ಅವರ ಮೇಲೆ ಮಾನಹಾನಿಕರವಾದ ಸಂದೇಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದವರ ಮೇಲೆ ಮತ್ತು ಭಿತ್ತಿ ಪತ್ರ ಮತ್ತು ಕರಪತ್ರಗಳ ಮೂಲಕ ಅಪಪ್ರಚಾರ ಮಾಡಿದವರ ಮೇಲೆ ಪೊಲೀಸ್‌ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಾಲೂಕು ಪಂಚಾಯತ್ ಸಭೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಯಿತು.

ತಾ.ಪಂ.ಅಧ್ಯಕ್ಷ ಚನಿಯ ಅಧ್ಯಕ್ಷತೆಯಲ್ಲಿ ನಡೆದ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಜನ ಪ್ರತಿನಿಧಿಯ ಮೇಲೆ ಈ ರೀತಿ ಮಾಡಿದವರ ವಿರುದ್ಧ  ಸೈಬರ್ ದಾಳಿ ಮತ್ತು ಭಿತ್ತಿ ಪತ್ರ ಹರಡಿದವರ ಮೇಲೆ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು. ಪ್ರಭಾವಿಗಳ ಒತ್ತಡಕ್ಕೆ ಮಣಿದು ಪೊಲೀಸ್ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು. ಈ ಕುರಿತು ಚರ್ಚೆ ನಡೆದು ಒಂದು ವಾರದಲ್ಲಿ ತನಿಖೆಯ ಪ್ರಗತಿಯ ವರದಿಯನ್ನು ತಾ.ಪಂ.ಅಧ್ಯಕ್ಷರಿಗೆ ಸಲ್ಲಿಸಲು ಮತ್ತು ಅಪಪ್ರಚಾರ ಹರಡಿದವರ ಮೇಲೆ ಸೂಕ್ತ ಕ್ರಮಕ್ಕೆ ಸಭೆ ಸೂಚಿಸಿತು. ಈ ವಿಷಯವನ್ನು ಪ್ರಕರಣದ ತನಿಖೆ ನಡೆಸುವ ಅಧಿಕಾರಿಯ ಗಮನಕ್ಕೆ ತರುವುದಾಗಿ ಸುಳ್ಯ ಎಸ್.ಐ ಸಭೆಗೆ ತಿಳಿಸಿದರು.
ವಿವಿಧ ಸಮಸ್ಯೆಗಳ ಬಗ್ಗೆ ತಾಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ನಡೆಯಿತು.
ಉಪಾಧ್ಯಕ್ಷೆ ಶುಭದಾ ಎಸ್.ರೈ, ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ತಾ.ಪಂ.ಸಹಾಯಕ ನಿರ್ದೇಶಕ ಭವಾನಿಶಂಕರ, ಜಿ.ಪಂ.ಸದಸ್ಯರು, ತಾ.ಪಂ.ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

13 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago