Advertisement
ರಾಜ್ಯ

ತಿತಿಮತಿ-ಹುಣಸೂರು ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ಪ್ರಸ್ತಾಪ : ಶಾಸಕ ಕೆ.ಜಿ.ಬೋಪಯ್ಯ ತೀವ್ರ ಅಸಮಾಧಾನ

Share

ಮಡಿಕೇರಿ :ತಿತಿಮತಿ- ಹುಣಸೂರು ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರವನ್ನು ನಿಷೇಧಿಸುವ ಪ್ರಸ್ತಾಪ ಡೋಂಗಿ ಪರಿಸರವಾದಿಗಳ ಹಾಗೂ ಅರಣ್ಯಾಧಿಕಾರಿಗಳ ಕೃಪಪೋಷಿತ ಹುನ್ನಾರ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊಡಗಿನ ಕೆಲ ಡೋಂಗಿ ಪರಿಸರವಾದಿಗಳು ತಿತಿಮತಿ- ಹುಣಸೂರು ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರವನ್ನು ನಿಷೇಧಿಸುವ ಬೇಡಿಕೆಯನ್ನು ಮುಂದಿಟ್ಟುಕೊಂಡು ಕಳೆದ ಹಲವು ವರ್ಷಗಳಿಂದ ಷಡ್ಯಂತ್ರ ರೂಪಿಸುತ್ತಿದ್ದಾರೆ. ಹಾಗಾಗಿ ಈಗಿನ ಪ್ರಸ್ತಾಪವನ್ನು ಸಂಪೂರ್ಣವಾಗಿ ತಳ್ಳಿಹಾಕಲು ಸಾಧ್ಯವಿಲ್ಲ. ಈ ಬಗ್ಗೆ ಶೀಘ್ರದಲ್ಲೆ ಪರಿಶೀಲನೆ ನಡೆಸಿ ವಾಸ್ತವಾಂಶ ಪತ್ತೆಹಚ್ಚಲಾಗುವುದು. ಬಳಿಕ ಜನರ ಭಾವನೆಗಳಿಗೆ ಪೂರಕವಾಗಿ ಮುಂದುವರೆಯಲಾಗುವುದು ಎಂದು ಹೇಳಿದರು.ಯಾವುದೇ ಕಾರಣಕ್ಕೂ ಈ ಪ್ರಸ್ತಾಪ ಜಾರಿಯಾಗಬಾರದು, ಜನರಿಗೆ ತೊಂದರೆಯಾಗುವ ರೀತಿ ಯಾವುದೇ ಮಾರ್ಗಸೂಚಿ ಬದಲಾಗಬಾರದು ಎಂದು ಬೋಪಯ್ಯ ಹೇಳಿದರು.

ತಿತಿಮತಿ-ಹುಣಸೂರು ಮುಖ್ಯ ರಸ್ತೆಯ ಎಡಬದಿಯಲ್ಲಿರುವ ದೇವಮಚ್ಚಿ ಮತ್ತು ಮಾವುಕಲ್ ವ್ಯಾಪ್ತಿಯ ಮೀಸಲು ಅರಣ್ಯ ಪ್ರದೇಶವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಮತ್ತಿಗೋಡು ವನ್ಯಜೀವಿ ವಲಯಕ್ಕೆ ಸೇರ್ಪಡೆಗೊಳಿಸುವ ಕ್ರಮ ಕೂಡ ಅರಣ್ಯ ಇಲಾಖೆಯ ಕಾನೂನುಬಾಹಿರ ಕ್ರಮವಾಗಿದೆ. ಇಲ್ಲಿ ಪಾಲಿಸಬೇಕಾದ ಯಾವ ನಿಯಮಾವಳಿಯನ್ನು ಕೂಡ ಅರಣ್ಯ ಇಲಾಖೆ ಪಾಲಿಸಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ಕನಿಷ್ಠ ಗ್ರಾ.ಪಂ. ವ್ಯಾಪ್ತಿಯ ಗ್ರಾಮಸಭೆಯ ಅನುಮೋದನೆಯನ್ನು ಕೂಡ ಪಡೆಯದೆ ಇಲಾಖೆಯ ಮೇಲ್ಮಟ್ಟದಲ್ಲಿ ಈ ಆದೇಶ ಮಾಡಲಾಗಿದೆ. ಸದಾ ಜನರಿಗೆ ವಿವಿಧ ರೀತಿಯಲ್ಲಿ ತೊಂದರೆ ನೀಡುವ ಅರಣ್ಯ ಇಲಾಖೆ ಇಲ್ಲಿಯೂ ಕೂಡ ತನ್ನ ಜನವಿರೋಧಿ ನೀತಿ ಅನುಸರಿಸಿದೆ. ಪರಿಸರವಾದಿಗಳ ಹಿಡಿತದಲ್ಲಿರುವ ಕೆಲ ಅರಣ್ಯಾಧಿಕಾರಿಗಳು ಅರಣ್ಯ ಭವನದಲ್ಲಿ ಕುಳಿತು ತಮ್ಮ ಮನಸೋಇಚ್ಚೆ ಆದೇಶ ನೀಡಿದರೆ ಕ್ಷೇತ್ರದ ಜನರ ಹಿತಾದೃಷ್ಠಿಯಿಂದ ಅದನ್ನು ಸಹಿಸಿಕೊಂಡು ಕೂರಲು ಸಾಧ್ಯವಿಲ್ಲ. ಇವರ ಜನವಿರೋಧಿ ನೀತಿಗಳನ್ನು ಎಲ್ಲಿ ಪ್ರಶ್ನೆ ಮಾಡಬೇಕೊ ಅಲ್ಲಿ ಮಾಡುತ್ತೇನೆ ಎಂದು ಬೋಪಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ರಾಜಕಾರಣದಲ್ಲಿ ಇತ್ತೀಚೆಗೆ ಉಂಟಾದ ಕೆಲ ಗೊಂದಲದ ವಾತವರಣದಿಂದಾಗಿ ಸಚಿವರಿಗೆ ಖಾತೆ ಹಂಚಿಕೆಯಾಗಿಲ್ಲ. ಶೀಘ್ರದಲ್ಲೇ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಅರಣ್ಯ ಖಾತೆ ವಹಿಸಿಕೊಳ್ಳುವ ಸಚಿವರಿಗೆ ಇಲ್ಲಿನ ವಾಸ್ತವಾಂಶವನ್ನು ಮನವರಿಕೆ ಮಾಡಿಕೊಟ್ಟು ಜನಜೀವನಕ್ಕೆ ಅನುಕೂಲವಾಗುವ ರೀತಿಯ ಆದೇಶ ಹೊರಡಿಸಲು ಪ್ರಯತ್ನಿಸಲಾಗುವುದು ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

1 hour ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

7 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

19 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

20 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago