ತುಳುನಾಡ ಪೊರ್ಲು ಸೇವಾ ಟ್ರಸ್ಟ್ ನಿಂದ ನೆರವು

July 31, 2019
5:00 PM

ಸುಳ್ಯ:  ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ 26ನೇ ತುರ್ತು ಸೇವಾ ಯೋಜನೆಯ ಸೇವಾ ಹಸ್ತಾಂತರ  ನಡೆಯಿತು.

ಸುಳ್ಯ ದೊಡ್ಡತೋಟ ಗಬಲಡ್ಕ ಬಾಲಕೃಷ್ಣ ಭಂಡಾರಿಯವರ ಕಿರಿಯ ಮಗ ಪುನೀತ್ ಅವರು  ಶಾಲಾ ಮೈದಾನದಲ್ಲಿ ಗೆಳೆಯರೊಂದಿಗೆ ಕ್ರಿಕೆಟ್ ಆಟ ಆಡುತ್ತಿರುವಾಗ ಆಕಸ್ಮಿಕವಾಗಿ ಬಿದ್ದು ಕುತ್ತಿಗೆ ಮತ್ತು ಬೆನ್ನು ಹುರಿಯ ನಡುವಿನ ನರ ಸಡಿಲಗೊಂಡು ಉಸಿರಾಟವಾಡಲು ತೀವ್ರ ಸಮಸ್ಯೆಯಾಗಿ ತಕ್ಷಣ ಮಂಗಳೂರಿನ ಫಾಧರ್ ಮುಲ್ಲರ್ ಆಸ್ವತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ನೀಡಿದ ವೈದ್ಯರು ಬದುಕುವುದೇ ಕಷ್ಟ ಎಂದು ತಿಳಿಸಿದರು. ಆದರೆ ಸತತ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಚಿಕಿತ್ಸೆಯ ದಿನದ ವೆಚ್ಚ 15,000 ರೂಪಾಯಿ ತಗಲುತ್ತಿದ್ದು ಪುನೀತ್ ಅವರ ಅಣ್ಣನಿಗೆ ದೊಡ್ಡತೋಟದಲ್ಲಿ ಸೆಲೂನ್ ಅಂಗಡಿ ಇದೆ ಅಷ್ಟೇ ಬೇರೇನೂ ಆದಾಯ ಇಲ್ಲದ ಈ ಕುಟುಂಬ ಕಂಗಾಲಾಗಿತ್ತು. ಇವರ ಕಷ್ಟವನ್ನು ಅರಿತ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ರೂ.10,000 ಚೆಕ್ ಅನ್ನು ಇಂದು ಪುನೀತ್ ಅವರ ಮನೆಯಲ್ಲಿ ಹಸ್ತಾಂತರಿಸಲಾಯಿತು.

ಈ ಸಮಯದಲ್ಲಿ ಪುನೀತ್ ನ ಅಣ್ಣ ವಿನಯ್ ಕುಮಾರ್ ಮತ್ತು ಟ್ರಸ್ಟ್ ಸೇವಾ ಬಾಂಧವರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ
ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು
August 10, 2026
6:05 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ
August 9, 2026
12:36 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror