ಸುಳ್ಯ: ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ 26ನೇ ತುರ್ತು ಸೇವಾ ಯೋಜನೆಯ ಸೇವಾ ಹಸ್ತಾಂತರ ನಡೆಯಿತು.
ಸುಳ್ಯ ದೊಡ್ಡತೋಟ ಗಬಲಡ್ಕ ಬಾಲಕೃಷ್ಣ ಭಂಡಾರಿಯವರ ಕಿರಿಯ ಮಗ ಪುನೀತ್ ಅವರು ಶಾಲಾ ಮೈದಾನದಲ್ಲಿ ಗೆಳೆಯರೊಂದಿಗೆ ಕ್ರಿಕೆಟ್ ಆಟ ಆಡುತ್ತಿರುವಾಗ ಆಕಸ್ಮಿಕವಾಗಿ ಬಿದ್ದು ಕುತ್ತಿಗೆ ಮತ್ತು ಬೆನ್ನು ಹುರಿಯ ನಡುವಿನ ನರ ಸಡಿಲಗೊಂಡು ಉಸಿರಾಟವಾಡಲು ತೀವ್ರ ಸಮಸ್ಯೆಯಾಗಿ ತಕ್ಷಣ ಮಂಗಳೂರಿನ ಫಾಧರ್ ಮುಲ್ಲರ್ ಆಸ್ವತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ನೀಡಿದ ವೈದ್ಯರು ಬದುಕುವುದೇ ಕಷ್ಟ ಎಂದು ತಿಳಿಸಿದರು. ಆದರೆ ಸತತ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಚಿಕಿತ್ಸೆಯ ದಿನದ ವೆಚ್ಚ 15,000 ರೂಪಾಯಿ ತಗಲುತ್ತಿದ್ದು ಪುನೀತ್ ಅವರ ಅಣ್ಣನಿಗೆ ದೊಡ್ಡತೋಟದಲ್ಲಿ ಸೆಲೂನ್ ಅಂಗಡಿ ಇದೆ ಅಷ್ಟೇ ಬೇರೇನೂ ಆದಾಯ ಇಲ್ಲದ ಈ ಕುಟುಂಬ ಕಂಗಾಲಾಗಿತ್ತು. ಇವರ ಕಷ್ಟವನ್ನು ಅರಿತ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ರೂ.10,000 ಚೆಕ್ ಅನ್ನು ಇಂದು ಪುನೀತ್ ಅವರ ಮನೆಯಲ್ಲಿ ಹಸ್ತಾಂತರಿಸಲಾಯಿತು.
ಈ ಸಮಯದಲ್ಲಿ ಪುನೀತ್ ನ ಅಣ್ಣ ವಿನಯ್ ಕುಮಾರ್ ಮತ್ತು ಟ್ರಸ್ಟ್ ಸೇವಾ ಬಾಂಧವರು ಉಪಸ್ಥಿತರಿದ್ದರು.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…