ಸುಳ್ಯ: ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ 26ನೇ ತುರ್ತು ಸೇವಾ ಯೋಜನೆಯ ಸೇವಾ ಹಸ್ತಾಂತರ ನಡೆಯಿತು.
ಸುಳ್ಯ ದೊಡ್ಡತೋಟ ಗಬಲಡ್ಕ ಬಾಲಕೃಷ್ಣ ಭಂಡಾರಿಯವರ ಕಿರಿಯ ಮಗ ಪುನೀತ್ ಅವರು ಶಾಲಾ ಮೈದಾನದಲ್ಲಿ ಗೆಳೆಯರೊಂದಿಗೆ ಕ್ರಿಕೆಟ್ ಆಟ ಆಡುತ್ತಿರುವಾಗ ಆಕಸ್ಮಿಕವಾಗಿ ಬಿದ್ದು ಕುತ್ತಿಗೆ ಮತ್ತು ಬೆನ್ನು ಹುರಿಯ ನಡುವಿನ ನರ ಸಡಿಲಗೊಂಡು ಉಸಿರಾಟವಾಡಲು ತೀವ್ರ ಸಮಸ್ಯೆಯಾಗಿ ತಕ್ಷಣ ಮಂಗಳೂರಿನ ಫಾಧರ್ ಮುಲ್ಲರ್ ಆಸ್ವತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ನೀಡಿದ ವೈದ್ಯರು ಬದುಕುವುದೇ ಕಷ್ಟ ಎಂದು ತಿಳಿಸಿದರು. ಆದರೆ ಸತತ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಚಿಕಿತ್ಸೆಯ ದಿನದ ವೆಚ್ಚ 15,000 ರೂಪಾಯಿ ತಗಲುತ್ತಿದ್ದು ಪುನೀತ್ ಅವರ ಅಣ್ಣನಿಗೆ ದೊಡ್ಡತೋಟದಲ್ಲಿ ಸೆಲೂನ್ ಅಂಗಡಿ ಇದೆ ಅಷ್ಟೇ ಬೇರೇನೂ ಆದಾಯ ಇಲ್ಲದ ಈ ಕುಟುಂಬ ಕಂಗಾಲಾಗಿತ್ತು. ಇವರ ಕಷ್ಟವನ್ನು ಅರಿತ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ರೂ.10,000 ಚೆಕ್ ಅನ್ನು ಇಂದು ಪುನೀತ್ ಅವರ ಮನೆಯಲ್ಲಿ ಹಸ್ತಾಂತರಿಸಲಾಯಿತು.
ಈ ಸಮಯದಲ್ಲಿ ಪುನೀತ್ ನ ಅಣ್ಣ ವಿನಯ್ ಕುಮಾರ್ ಮತ್ತು ಟ್ರಸ್ಟ್ ಸೇವಾ ಬಾಂಧವರು ಉಪಸ್ಥಿತರಿದ್ದರು.
ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 2.1/2…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…
ದಾವಣಗೆರೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…