ಸುಳ್ಯ: ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ 26ನೇ ತುರ್ತು ಸೇವಾ ಯೋಜನೆಯ ಸೇವಾ ಹಸ್ತಾಂತರ ನಡೆಯಿತು.
ಸುಳ್ಯ ದೊಡ್ಡತೋಟ ಗಬಲಡ್ಕ ಬಾಲಕೃಷ್ಣ ಭಂಡಾರಿಯವರ ಕಿರಿಯ ಮಗ ಪುನೀತ್ ಅವರು ಶಾಲಾ ಮೈದಾನದಲ್ಲಿ ಗೆಳೆಯರೊಂದಿಗೆ ಕ್ರಿಕೆಟ್ ಆಟ ಆಡುತ್ತಿರುವಾಗ ಆಕಸ್ಮಿಕವಾಗಿ ಬಿದ್ದು ಕುತ್ತಿಗೆ ಮತ್ತು ಬೆನ್ನು ಹುರಿಯ ನಡುವಿನ ನರ ಸಡಿಲಗೊಂಡು ಉಸಿರಾಟವಾಡಲು ತೀವ್ರ ಸಮಸ್ಯೆಯಾಗಿ ತಕ್ಷಣ ಮಂಗಳೂರಿನ ಫಾಧರ್ ಮುಲ್ಲರ್ ಆಸ್ವತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ನೀಡಿದ ವೈದ್ಯರು ಬದುಕುವುದೇ ಕಷ್ಟ ಎಂದು ತಿಳಿಸಿದರು. ಆದರೆ ಸತತ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಚಿಕಿತ್ಸೆಯ ದಿನದ ವೆಚ್ಚ 15,000 ರೂಪಾಯಿ ತಗಲುತ್ತಿದ್ದು ಪುನೀತ್ ಅವರ ಅಣ್ಣನಿಗೆ ದೊಡ್ಡತೋಟದಲ್ಲಿ ಸೆಲೂನ್ ಅಂಗಡಿ ಇದೆ ಅಷ್ಟೇ ಬೇರೇನೂ ಆದಾಯ ಇಲ್ಲದ ಈ ಕುಟುಂಬ ಕಂಗಾಲಾಗಿತ್ತು. ಇವರ ಕಷ್ಟವನ್ನು ಅರಿತ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ರೂ.10,000 ಚೆಕ್ ಅನ್ನು ಇಂದು ಪುನೀತ್ ಅವರ ಮನೆಯಲ್ಲಿ ಹಸ್ತಾಂತರಿಸಲಾಯಿತು.
ಈ ಸಮಯದಲ್ಲಿ ಪುನೀತ್ ನ ಅಣ್ಣ ವಿನಯ್ ಕುಮಾರ್ ಮತ್ತು ಟ್ರಸ್ಟ್ ಸೇವಾ ಬಾಂಧವರು ಉಪಸ್ಥಿತರಿದ್ದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…