Advertisement
ಸುದ್ದಿಗಳು

ತುಳುವೆರೆ ಪಾರಂಪರಿಕ ಜ್ಞಾನ: ವಿಚಾರ ಸಂಕಿರಣ

Share

ಧರ್ಮಸ್ಥಳ :  ಪ್ರಾಚೀನ ಮತ್ತುಆಧುನಿಕತೆಯ ಸಂಗಮ ಕಾಲದಲ್ಲಿರುವ ನಾವು ಭವ್ಯ ಇತಿಹಾಸ, ಪರಂಪರೆ ಮತ್ತು ವೈವಿಧ್ಯಮಯ ಹಿನ್ನೆಲೆ ಹೊಂದಿರುವ ತುಳುಭಾಷೆ ಮತ್ತು ಸಂಸ್ಕೃತಿ ಬಗ್ಗೆ ಕೇಳರಿಮೆ ಹೊಂದದೆ ಅಭಿಮಾನ, ಗೌರವದೊಂದಿಗೆ ಉಳಿಸಿಕೊಳ್ಳಬೇಕು ಎಂದು ಧರ್ಮಸ್ಥಳದ ಹೇಮಾವತಿ ವೀ ಹೆಗ್ಗಡೆಯವರು ಹೇಳಿದರು.

ಮಂಗಳೂರು ವಿಶ್ವವಿದ್ಯಾಲಯದ ಎಸ್.ಡಿ.ಎಂ.ತುಳುಪೀಠ ಮತ್ತು ಉಜಿರೆಯ ಎಸ್.ಡಿ.ಎಂ.ಕಾಲೇಜಿನ ಕನ್ನಡ ವಿಭಾಗದ ತುಳು ಸಂಘದ ಜಂಟಿ ಆಶ್ರಯದಲ್ಲಿಉಜಿರೆಯಲ್ಲಿಎಸ್.ಡಿ.ಎಂ.ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಗುರುವಾರ ಆಯೋಜಿಸಿದ “ತುಳುವೆರೆ ಪಾರಂಪರಿಕ ಜ್ಞಾನ” ಎಂಬ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.  ತುಳುನಾಡಿನ ನಂಬಿಕೆ-ನಡವಳಿಕೆಗಳು, ಆಚಾರ-ವಿಚಾರಗಳು, ಸಂದಿ-ಪಾಡ್ದನಗಳು, ತಾಳ ಮದ್ದಳೆ, ಯಕ್ಷಗಾನ, ಜಾನಪದ ಕಲೆಗಳು, ಬಲೀಂದ್ರ ಪೂಜೆ, ಭೂತಾರಾಧನೆ, ನಾಗಾರಾಧನೆ, ಕೃಷಿ ಸಂಸ್ಕೃತಿ ನಮ್ಮ ಸಾರ್ಥಕ ಬದುಕಿಗೆ ಪ್ರೇರಕವಾಗಿವೆ.  ಸರ್ವಧರ್ಮೀಯರೊಂದಿಗೆ ಸಾಮರಸ್ಯದ ಸಾರ್ಥಕ ಬದುಕಿಗೆ ಮಾರ್ಗದರ್ಶಕವಾಗಿದೆ ಎಂದರು.

ಎಸ್.ಡಿ.ಎಂ.ಕಾಲೇಜಿನ ಐಚ್ಛಿಕ ಕನ್ನಡ ವಿದ್ಯಾರ್ಥಿಗಳು ರಚಿಸಿದ “ಅರಿವು”  ಡಿಜಿಟಲ್ ಪತ್ರಿಕೆಯನ್ನು ಡಾ. ಬಿ. ಯಶೋವರ್ಮ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಯುವಜನತೆ ತುಳು ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು ಎಂದು ಅವರು ಸಲಹೆ ನೀಡಿದರು.

ತುಳು ನಾಡಿನ ನಂಬಿಕೆಗಳು ಮೂಡ ನಂಬಿಕೆಗಳಲ್ಲ, ಮೂಲ ನಂಬಿಕೆಗಳು: 

ಅಧ್ಯಕ್ಷತೆ ವಹಿಸಿದ ಮಂಗಳೂರು ವಿ.ವಿ. ಕುಲಪತಿ ಡಾ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಮಾತನಾಡಿ, ಭವ್ಯ ಇತಿಹಾಸ ಮತ್ತು ಪರಂಪರೆ ಹೊಂದಿರುವ ವೈವಿದ್ಯಮಯ ತುಳು ಭಾಷೆ ಮತ್ತು ಸಂಸ್ಕೃತಿಯನ್ನು ಮರೆತರೂ, ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು. ನಮ್ಮ ನಂಬಿಕೆ-ನಡವಳಿಕೆಗಳು, ಆಚಾರ-ವಿಚಾರಗಳು ವೈಜ್ಞಾನಿಕ ಹಿನ್ನಲೆ ಹೊಂದಿದ್ದುಗೊಡ್ಡು ಸಂಪ್ರಾಯಗಳಲ್ಲ. ತುಳುನಾಡಿನ ನಂಬಿಕೆಗಳು ಮೂಡ ನಂಬಿಕೆಗಳಲ್ಲ, ಮೂಲ ನಂಬಿಕೆಗಳು ಎಂದು ಅವರು ಸ್ಪಷ್ಟ ಪಡಿಸಿದರು.

ಮಂಗಳೂರು ವಿ.ವಿ. ತುಳು ಪೀಠದ ಸಂಯೋಜಕ ಡಾ.ಮಾಧವ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಡಿ.ಎಂ.ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್.ಸತೀಶ್ಚಂದ್ರ  ಸ್ವಾಗತಿಸಿದರು. ಡಾ. ಸನ್ಮತಿ ಕುಮಾರ್ ಧನ್ಯವಾದವಿತ್ತರು. ಡಾ. ದಿವಾಕರ ಕೆ. ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

2 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

12 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

13 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

17 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago