Advertisement
ಸುದ್ದಿಗಳು

ತುಳುವೆರೆ ಪಾರಂಪರಿಕ ಜ್ಞಾನ: ವಿಚಾರ ಸಂಕಿರಣ

Share

ಧರ್ಮಸ್ಥಳ :  ಪ್ರಾಚೀನ ಮತ್ತುಆಧುನಿಕತೆಯ ಸಂಗಮ ಕಾಲದಲ್ಲಿರುವ ನಾವು ಭವ್ಯ ಇತಿಹಾಸ, ಪರಂಪರೆ ಮತ್ತು ವೈವಿಧ್ಯಮಯ ಹಿನ್ನೆಲೆ ಹೊಂದಿರುವ ತುಳುಭಾಷೆ ಮತ್ತು ಸಂಸ್ಕೃತಿ ಬಗ್ಗೆ ಕೇಳರಿಮೆ ಹೊಂದದೆ ಅಭಿಮಾನ, ಗೌರವದೊಂದಿಗೆ ಉಳಿಸಿಕೊಳ್ಳಬೇಕು ಎಂದು ಧರ್ಮಸ್ಥಳದ ಹೇಮಾವತಿ ವೀ ಹೆಗ್ಗಡೆಯವರು ಹೇಳಿದರು.

ಮಂಗಳೂರು ವಿಶ್ವವಿದ್ಯಾಲಯದ ಎಸ್.ಡಿ.ಎಂ.ತುಳುಪೀಠ ಮತ್ತು ಉಜಿರೆಯ ಎಸ್.ಡಿ.ಎಂ.ಕಾಲೇಜಿನ ಕನ್ನಡ ವಿಭಾಗದ ತುಳು ಸಂಘದ ಜಂಟಿ ಆಶ್ರಯದಲ್ಲಿಉಜಿರೆಯಲ್ಲಿಎಸ್.ಡಿ.ಎಂ.ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಗುರುವಾರ ಆಯೋಜಿಸಿದ “ತುಳುವೆರೆ ಪಾರಂಪರಿಕ ಜ್ಞಾನ” ಎಂಬ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.  ತುಳುನಾಡಿನ ನಂಬಿಕೆ-ನಡವಳಿಕೆಗಳು, ಆಚಾರ-ವಿಚಾರಗಳು, ಸಂದಿ-ಪಾಡ್ದನಗಳು, ತಾಳ ಮದ್ದಳೆ, ಯಕ್ಷಗಾನ, ಜಾನಪದ ಕಲೆಗಳು, ಬಲೀಂದ್ರ ಪೂಜೆ, ಭೂತಾರಾಧನೆ, ನಾಗಾರಾಧನೆ, ಕೃಷಿ ಸಂಸ್ಕೃತಿ ನಮ್ಮ ಸಾರ್ಥಕ ಬದುಕಿಗೆ ಪ್ರೇರಕವಾಗಿವೆ.  ಸರ್ವಧರ್ಮೀಯರೊಂದಿಗೆ ಸಾಮರಸ್ಯದ ಸಾರ್ಥಕ ಬದುಕಿಗೆ ಮಾರ್ಗದರ್ಶಕವಾಗಿದೆ ಎಂದರು.

ಎಸ್.ಡಿ.ಎಂ.ಕಾಲೇಜಿನ ಐಚ್ಛಿಕ ಕನ್ನಡ ವಿದ್ಯಾರ್ಥಿಗಳು ರಚಿಸಿದ “ಅರಿವು”  ಡಿಜಿಟಲ್ ಪತ್ರಿಕೆಯನ್ನು ಡಾ. ಬಿ. ಯಶೋವರ್ಮ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಯುವಜನತೆ ತುಳು ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು ಎಂದು ಅವರು ಸಲಹೆ ನೀಡಿದರು.

ತುಳು ನಾಡಿನ ನಂಬಿಕೆಗಳು ಮೂಡ ನಂಬಿಕೆಗಳಲ್ಲ, ಮೂಲ ನಂಬಿಕೆಗಳು: 

ಅಧ್ಯಕ್ಷತೆ ವಹಿಸಿದ ಮಂಗಳೂರು ವಿ.ವಿ. ಕುಲಪತಿ ಡಾ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಮಾತನಾಡಿ, ಭವ್ಯ ಇತಿಹಾಸ ಮತ್ತು ಪರಂಪರೆ ಹೊಂದಿರುವ ವೈವಿದ್ಯಮಯ ತುಳು ಭಾಷೆ ಮತ್ತು ಸಂಸ್ಕೃತಿಯನ್ನು ಮರೆತರೂ, ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು. ನಮ್ಮ ನಂಬಿಕೆ-ನಡವಳಿಕೆಗಳು, ಆಚಾರ-ವಿಚಾರಗಳು ವೈಜ್ಞಾನಿಕ ಹಿನ್ನಲೆ ಹೊಂದಿದ್ದುಗೊಡ್ಡು ಸಂಪ್ರಾಯಗಳಲ್ಲ. ತುಳುನಾಡಿನ ನಂಬಿಕೆಗಳು ಮೂಡ ನಂಬಿಕೆಗಳಲ್ಲ, ಮೂಲ ನಂಬಿಕೆಗಳು ಎಂದು ಅವರು ಸ್ಪಷ್ಟ ಪಡಿಸಿದರು.

ಮಂಗಳೂರು ವಿ.ವಿ. ತುಳು ಪೀಠದ ಸಂಯೋಜಕ ಡಾ.ಮಾಧವ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಡಿ.ಎಂ.ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್.ಸತೀಶ್ಚಂದ್ರ  ಸ್ವಾಗತಿಸಿದರು. ಡಾ. ಸನ್ಮತಿ ಕುಮಾರ್ ಧನ್ಯವಾದವಿತ್ತರು. ಡಾ. ದಿವಾಕರ ಕೆ. ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

14 minutes ago

ವಯನಾಡಿನಲ್ಲಿ ಭೂಕುಸಿತದ ದುರಂತ | ಒಂದು ಬಲಿ , 7 ಮಂದಿ ನಾಪತ್ತೆ | ಇದು ಮಾನವ ನಿರ್ಮಿತ ದುರಂತ ಎಂದ ಸಚಿವ

ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…

5 hours ago

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

7 hours ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

8 hours ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

8 hours ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

12 hours ago