ಸುಳ್ಯ: ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಸೇರ್ಪಡೆಗೊಳಿಸಲು ಕಾಸರಗೋಡು ಸಂಸದರಾದ ರಾಜ್ ಮೋಹನ್ ಉಣ್ಣಿತ್ತಾನ್ ಲೋಕಸಭೆಯಲ್ಲಿ ಒತ್ತಾಯಿಸಿದರು.
ಕರ್ನಾಟಕದ ಎರಡು ಕರಾವಳಿ ಜಿಲ್ಲೆಗಳು ಮತ್ತು ಕಾಸರಗೋಡು ಜಿಲ್ಲೆಯ ಬಹುತೇಕರು ದ್ರಾವಿಡ ಭಾಷೆಗಳಲ್ಲೊಂದಾದ ತುಳು ಭಾಷಿಕರಾಗಿದ್ದಾರೆ. 2011 ರ ಖಾನೇಶುಮಾರಿ ವರದಿ ಪ್ರಕಾರ ಸುಮಾರು 18,46,427 ಜನರು ತುಳು ಭಾಷಿಕರಾಗಿದ್ದಾರೆ. ಎಂಟನೇ ಪರಿಚ್ಛೇದದಲ್ಲಿ ಸೇರ್ಪಡೆಗೊಂಡಿರುವ ಮಣಿಪುರಿ(17,61,079), ಸಂಸ್ಕೃತ (24,821) ಮುಂತಾದ ಭಾಷೆಗಳಿಗೆ ಹೋಲಿಸಿದರೆ ತುಳು ಭಾಷಿಕರ ಸಂಖ್ಯೆ ಅಧಿಕವಾಗಿದೆ ಎಂದು ಅವರು ಅಂಕಿ ಅಂಶ ಸಹಿತ ವಿವರಿಸಿದರು.
ತುಳು ಭಾಷೆಯನ್ನು ಎಂಟನೇ ಪರಿಚ್ಛೇದದಲ್ಲಿ ಸೇರ್ಪಡೆಗೊಳಿಸಿದಲ್ಲಿ ಸಾಹಿತ್ಯ ಅಕಾಡೆಮಿಯಿಂದ ಅಂಗೀಕಾರ ಲಭಿಸುವುದು ಮಾತ್ರವಲ್ಲದೆ, ಇತರ ಭಾಷೆಗಳಿಗೆ ತುಳು ಸಾಹಿತ್ಯ ಕೃತಿಗಳನ್ನು ಇತರ ಭಾಷೆಗಳಿಗೆ ಅನುವಾದ ಮಾಡಲೂ ಸಾಧ್ಯವಾಗಲಿದೆ. ಸಂಸತ್ ಸದಸ್ಯರು ಮತ್ತು ಶಾಸಕರಿಗೆ ಪಾರ್ಲಿಮೆಂಟ್ ಮತ್ತು ವಿಧಾನಸಭೆಗಳಲ್ಲಿ ತುಳುವಿನಲ್ಲಿ ಪ್ರಶ್ನೆಗಳನ್ನು ಕೇಳಲು ಮತ್ತು ನಾಗರಿಕ ಸೇವಾ ಪರೀಕ್ಷೆಗಳೂ ಸೇರಿದಂತೆ ಅಖಿಲ ಭಾರತ ಮಟ್ಟದ ಪರೀಕ್ಷೆಗಳನ್ನು ತುಳುವಿನಲ್ಲಿ ಬರೆಯಲು ಸಾಧ್ಯವಾಗಲಿದೆಯೆಂದು ಅವರು ವಿವರಿಸಿದರು.
ಕೇರಳ ಹಾಗೂ ಕರ್ನಾಟಕದ ತುಳು ಭಾಷಿಕರ ಹಲವು ದಶಕಗಳ ಬೇಡಿಕೆಯನ್ನು ಸಂಸದ ಶ್ರೀ ಉಣ್ಣಿತ್ತಾನ್ ಲೋಕಸಭೆಯಲ್ಲಿ ಮಂಡಿಸಿದರು. 2018 ರಲ್ಲಿ ಯುನೆಸ್ಕೋ ಚೈನಾದ ಚಾಂಗ್ಸಾದಲ್ಲಿ ಆಯೋಜಿಸಿದ್ದ ಯುಯುಲು ಘೋಷಣೆಯ ಕೆಲವು ಆಯ್ದ ಭಾಗಗಳನ್ನು ಓದಿ ಸಂಸದರು ಶೂನ್ಯ ವೇಳೆಯಲ್ಲಿ ತುಳು ಭಾಷೆಗೆ ಅಂಗೀಕಾರಕ್ಕಾಗಿ ಮಾತನಾಡಿದರು.
ಈಗಿನ ಪ್ರಕಾರ ಮೇ 21 ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದೆ. ಮುಂಗಾರು…
ಸನಾತನ ಭಾರತದ ಆಧ್ಯಾತ್ಮಕ ಸಾಧನೆಯ ಪುನರುತ್ಥಾನದ ಅಧ್ವರ್ಯುಗಳಲ್ಲಿ ಶಂಕರಾಚಾರ್ಯರು ಮೊದಲಿಗರು. ಹಾಗಾಗಿಯೇ ಅವರು…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ…
ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…
ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.
ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…