ಸುಳ್ಯ: ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಸೇರ್ಪಡೆಗೊಳಿಸಲು ಕಾಸರಗೋಡು ಸಂಸದರಾದ ರಾಜ್ ಮೋಹನ್ ಉಣ್ಣಿತ್ತಾನ್ ಲೋಕಸಭೆಯಲ್ಲಿ ಒತ್ತಾಯಿಸಿದರು.
ಕರ್ನಾಟಕದ ಎರಡು ಕರಾವಳಿ ಜಿಲ್ಲೆಗಳು ಮತ್ತು ಕಾಸರಗೋಡು ಜಿಲ್ಲೆಯ ಬಹುತೇಕರು ದ್ರಾವಿಡ ಭಾಷೆಗಳಲ್ಲೊಂದಾದ ತುಳು ಭಾಷಿಕರಾಗಿದ್ದಾರೆ. 2011 ರ ಖಾನೇಶುಮಾರಿ ವರದಿ ಪ್ರಕಾರ ಸುಮಾರು 18,46,427 ಜನರು ತುಳು ಭಾಷಿಕರಾಗಿದ್ದಾರೆ. ಎಂಟನೇ ಪರಿಚ್ಛೇದದಲ್ಲಿ ಸೇರ್ಪಡೆಗೊಂಡಿರುವ ಮಣಿಪುರಿ(17,61,079), ಸಂಸ್ಕೃತ (24,821) ಮುಂತಾದ ಭಾಷೆಗಳಿಗೆ ಹೋಲಿಸಿದರೆ ತುಳು ಭಾಷಿಕರ ಸಂಖ್ಯೆ ಅಧಿಕವಾಗಿದೆ ಎಂದು ಅವರು ಅಂಕಿ ಅಂಶ ಸಹಿತ ವಿವರಿಸಿದರು.
ತುಳು ಭಾಷೆಯನ್ನು ಎಂಟನೇ ಪರಿಚ್ಛೇದದಲ್ಲಿ ಸೇರ್ಪಡೆಗೊಳಿಸಿದಲ್ಲಿ ಸಾಹಿತ್ಯ ಅಕಾಡೆಮಿಯಿಂದ ಅಂಗೀಕಾರ ಲಭಿಸುವುದು ಮಾತ್ರವಲ್ಲದೆ, ಇತರ ಭಾಷೆಗಳಿಗೆ ತುಳು ಸಾಹಿತ್ಯ ಕೃತಿಗಳನ್ನು ಇತರ ಭಾಷೆಗಳಿಗೆ ಅನುವಾದ ಮಾಡಲೂ ಸಾಧ್ಯವಾಗಲಿದೆ. ಸಂಸತ್ ಸದಸ್ಯರು ಮತ್ತು ಶಾಸಕರಿಗೆ ಪಾರ್ಲಿಮೆಂಟ್ ಮತ್ತು ವಿಧಾನಸಭೆಗಳಲ್ಲಿ ತುಳುವಿನಲ್ಲಿ ಪ್ರಶ್ನೆಗಳನ್ನು ಕೇಳಲು ಮತ್ತು ನಾಗರಿಕ ಸೇವಾ ಪರೀಕ್ಷೆಗಳೂ ಸೇರಿದಂತೆ ಅಖಿಲ ಭಾರತ ಮಟ್ಟದ ಪರೀಕ್ಷೆಗಳನ್ನು ತುಳುವಿನಲ್ಲಿ ಬರೆಯಲು ಸಾಧ್ಯವಾಗಲಿದೆಯೆಂದು ಅವರು ವಿವರಿಸಿದರು.
ಕೇರಳ ಹಾಗೂ ಕರ್ನಾಟಕದ ತುಳು ಭಾಷಿಕರ ಹಲವು ದಶಕಗಳ ಬೇಡಿಕೆಯನ್ನು ಸಂಸದ ಶ್ರೀ ಉಣ್ಣಿತ್ತಾನ್ ಲೋಕಸಭೆಯಲ್ಲಿ ಮಂಡಿಸಿದರು. 2018 ರಲ್ಲಿ ಯುನೆಸ್ಕೋ ಚೈನಾದ ಚಾಂಗ್ಸಾದಲ್ಲಿ ಆಯೋಜಿಸಿದ್ದ ಯುಯುಲು ಘೋಷಣೆಯ ಕೆಲವು ಆಯ್ದ ಭಾಗಗಳನ್ನು ಓದಿ ಸಂಸದರು ಶೂನ್ಯ ವೇಳೆಯಲ್ಲಿ ತುಳು ಭಾಷೆಗೆ ಅಂಗೀಕಾರಕ್ಕಾಗಿ ಮಾತನಾಡಿದರು.
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…