ಮಂಗಳೂರು : ಕರ್ನಾಟಕ ಸಾಹಿತ್ಯ ಅಕಾಡೆಮಿ, ಜೈ ತುಳುನಾಡ್ (ರಿ.) ಮತ್ತು ಬೆಂಗಳೂರು ತುಳುವಾಸ್ ಕೌನ್ಸಿಲ್ ಇವರ ಸಹಯೋಗದಲ್ಲಿ ಜನವರಿ 27 ರಂದು ಮಂಗಳೂರಿನ ತುಳುಭವನದಲ್ಲಿ ತುಳು ಭಾಷೆ ಮತ್ತು ತುಳು ಲಿಪಿಯಲ್ಲಿ ಭಾರತದ ಸಂವಿಧಾನದ ಪೀಠಿಕೆಯನ್ನು ಬಿಡುಗಡೆಗೊಳಿಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ. ಜಿ. ಕತ್ತಲ್ಸಾರ್ ಅವರು ವಹಿಸಿಕೊಂಡು ತುಳು ಲಿಪಿಯ ಸಂವಿಧಾನದ ಪೀಠಿಕೆಯನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ತುಳು ಪರವಾಗಿ ದುಡಿಯುತ್ತಿರುವ ಸಂಘಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿ ಸಂಘಟನೆಗಳಿಗೆ ಸರ್ವ ರೀತಿಯ ಸಹಕಾರ ನೀಡುವ ಭರವಸೆಯನ್ನು ನೀಡಿದರು. ತುಳು ಸಂಸ್ಕೃತಿಯ ಉಳಿವಿಗಾಗಿ ಇನ್ನಷ್ಟು ಯೋಜನೆಗಳನ್ನು ಹಾಕಿಕೊಳ್ಳಲಾಗುವುದು ಎಂಬ ಭರವಸೆಯನ್ನು ನೀಡಿದರು.
ತುಳು ಭಾಷೆಯಲ್ಲಿ ಸಂವಿಧಾನದ ಬಿಡುಗಡೆ ಬಹುಕಾಲದ ಹಿಂದೆಯೇ ನಡೆಯಬೇಕಿದ್ದ ಕಾರ್ಯವಾಗಿತ್ತು, ಈ ದಿನ ಸಂವಿಧಾನದ ಪೀಠಿಕೆಯನ್ನು ತುಳು ಭಾಷೆ ಮತ್ತು ತುಳು ಲಿಪಿಯಲ್ಲಿ ರಚಿಸಲಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ ಡಾ. ಆಕಾಶ್ ರಾಜ್ ಜೈನ್ ಅಭಿಪ್ರಾಯಪಟ್ಟರು.
ಈ ಸಂದರ್ಭ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಲೀಲಾಕ್ಷ ಕರ್ಕೇರ, ನಿಟ್ಟೆ ಶಶಿಧರ ಶೆಟ್ಟಿ, ಸಿದ್ದಕಟ್ಟೆ ಮಲ್ಲಿಕಾ ಅಜಿತ್ ಶೆಟ್ಟಿ, ಅಕಾಡೆಮಿಯ ರಿಜಿಸ್ಟ್ರಾರ್ ರಾಜೇಶ್. ಈ, ಜೈ ತುಳುನಾಡ್ ಸಂಘ ಮತ್ತಿತರರು ಉಪಸ್ಥಿತರಿದ್ದರು.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…