Advertisement
ಕಾರ್ಯಕ್ರಮಗಳು

ತುಳು ಶಿವಳ್ಳಿ ಬ್ರಾಹ್ಮಣ ಸಭಾ ಜಿಲ್ಲಾ ಸಂಘ ಅಸ್ತಿತ್ವಕ್ಕೆ

Share

ಸುಳ್ಯ: ಸಮಾಜಕ್ಕೆ ಸಂಸ್ಕಾರ ತುಂಬಲು ಮತ್ತು ಸಮಾಜದ ಧ್ಯೇಯ ಉದ್ದೇಶದ ಈಡೇರಿಕೆಗೆ ಸಂಘಟನೆ ಅತೀ ಅಗತ್ಯ ಎಂದು ಸುಬ್ರಹ್ಮಣ್ಯ ಮಠಾಧಿಪತಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಸುಳ್ಯದ ಶ್ರೀ ರಾಘವೇಂದ್ರ ಮಠದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ತುಳು ಶಿವಳ್ಳಿ ಬ್ರಾಹ್ಮಣ ಸಭಾದ ದಕ್ಷಿಣ ಕನ್ನಡ ಜಿಲ್ಲಾ ಸಂಘವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಸಮಾಜಕ್ಕೆ ಸಂಘಟನೆ ಅಗತ್ಯ. ಸಂಘಟನೆ ಇದ್ದರೆ ಹೆಚ್ಚು ಕೆಲಸ ಮಾಡಲು ಮತ್ತು ಉನ್ನತ ಸಾಧನೆ ಮಾಡಲು ಸಾಧ್ಯ‌. ನಾವು ಗಟ್ಟಿಯಾಗಲು, ನಮ್ಮ ಅಸ್ತಿತ್ವನ್ನು ವ್ಯಾಪಿಸಲು ಸಂಘಟಿತರಾಗಬೇಕಾಗಿದೆ ಎಂದು ಕರೆ ನೀಡಿದರು‌. ಜ್ಞಾನ ಸಂಪಾದನೆ ಮಾಡಿ ಅದನ್ನು ಸಮಾಜಕ್ಕೆ ನೀಡಿದರೆ ಮನುಷ್ಯ ಜೀವನ ಸಾರ್ಥಕವಾಗುತ್ತದೆ. ಸ್ವಂತ ಅಧ್ಯಯನ ನಡೆಸಿ ಜ್ಞಾನವನ್ನು ಸಮಾಜಕ್ಕೆ ಧಾರೆಯೆರೆಯಬೇಕು ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಮಂಗಳೂರು ಶಾರದಾ ವಿದ್ಯಾಲಯದ ಅಧ್ಯಕ್ಷ ಎಂ.ಬಿ.ಪುರಾಣಿಕ್ ಮಾತನಾಡಿ ಪ್ರತಿಯೊಬ್ಬನಿಗೂ ಒಂದು ಧರ್ಮ ಇದೆ. ಧರ್ಮ ಎಂದರೆ ಆತನ ಗುಣ. ಆಚಾರ,ವಿಚಾರ ವೃತಾನುಷ್ಠಾನ, ನಿಯಮ ಸಂಸ್ಕಾರದಿಂದ ಆ ಗುಣವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಸಾಧ್ಯ. ಆ ಮೂಲಕ ಸರ್ವ ಚರಾಚರಗಳ ಶ್ರೇಯಾಭಿವೃದ್ಧಿಗೆ ಕೆಲಸ ಮಾಡಲು ಸಾಧ್ಯ. ನಮ್ಮ ಸಮಾಜಕ್ಕೆ ತೊಂದರೆ ಉಂಟಾದರೆ ಅದನ್ನು ಎದುರಿಸಲು ಸಂಘಟನೆ ಅಗತ್ಯ ಎಂದು ಅವರು ಹೇಳಿದರು.

ತುಳು ಶಿವಳ್ಳಿ ಬ್ರಾಹ್ಮಣ ಸಭಾದ ನೂತನ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾದ ಡಾ.ಎಂ.ಎಂ. ದಯಾಕರ್ ಮತ್ತು ಪದಾಧಿಕಾರಿಗಳು ಅಧಿಕಾರ ವಹಿಸಿಕೊಂಡರು. ಸುಳ್ಯ ತಾಲೂಕು ಶಿವಳ್ಳಿ ಸಂಪನ್ನದ ಅಧ್ಯಕ್ಷೆ ಮಮತಾ ಮೂಡಿತ್ತಾಯ, ಕಾರ್ಯದರ್ಶಿ ರಾಮಚಂದ್ರ ಸೋಮಯಾಗಿ, ನೂತನ ಜಿಲ್ಲಾ ಸಂಘದ ಕಾರ್ಯದರ್ಶಿ ಪ್ರಕಾಶ್ ಮೂಡಿತ್ತಾಯ, ಉಪಾಧ್ಯಕ್ಷ ವಾದಿರಾಜ ಮಡಮಣ್ಞಾಯ, ಸುಜಾತಾ ಸೋಮಯಾಗಿ, ಹರೀಶ್ ಪುತ್ತೂರಾಯ, ಗಣೇಶ್ ಹೆಬ್ಬಾರ್, ರಾಘವೇಂದ್ರ ಬೈಪಡಿತ್ತಾಯ, ಬಾಲಕೃಷ್ಣ ಮೂಡಂಬಡಿತ್ತಾಯ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಿ. 13ರಿಂದ 15ರವರೆಗೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿರುವ ತುಳು ಶಿವಳ್ಳಿ ಬ್ರಾಹ್ಮಣರ ವಿಶ್ವ ಮಹಾ ಸಮ್ಮೇಳನದ ಪೋಸ್ಟರ್ ಈ ಸಂದರ್ಭದಲ್ಲಿ ವಿದ್ಯಾಪ್ರಸನ್ನ ತೀರ್ಥ ಶ್ರೀಗಳು ಬಿಡುಗಡೆ ಮಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

15 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago