ತೆರಿಗೆ ತಪ್ಪಿಸಿ ಅಡಿಕೆ ಸಾಗಾಟಕ್ಕೆ ಯತ್ನ | ತೆರಿಗೆ ಇಲಾಖಾ ಅಧಿಕಾರಿಗಳಿಂದ ದಾಳಿ | 1 ಕೋಟಿಗೂ ಅಧಿಕ ದಂಡ |

June 5, 2020
3:01 PM
Advertisement

ಮಂಗಳೂರು: ವಾಣಿಜ್ಯ ತೆರಿಗೆ ಇಲಾಖಾ ಅಧಿಕಾರಿಗಳು ಕಳೆದ ಕೆಲವು ದಿನಗಳಿಂದ ಅಡಿಕೆ ಸಾಗಾಟದ ಮೇಲೆ ನಿಗಾ ಇರಿಸಿದ್ದಾರೆ. ಇದೀಗ  ಶಿವಮೊಗ್ಗ ಮತ್ತು ಸಾಗರ ದಲ್ಲಿ ಬುಧವಾರ 13 ಸ್ಥಳಗಳಲ್ಲಿ  ನಡೆಸಿದ ಕಾರ್ಯಾಚರಣೆಯಲ್ಲಿ  11 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಅನಧಿಕೃತವಾಗಿ ಸಂಗ್ರಹಿಸಿದ್ದನ್ನು  ಪತ್ತೆ ಮಾಡಿದ್ದು ಜಿಎಸ್‌ಟಿ ಅಡಿಯಲ್ಲಿ  1.1 ಕೋಟಿ ತೆರಿಗೆ ಮತ್ತು ದಂಡವನ್ನು ವಿಧಿಸಿದ್ದಾರೆ.

Advertisement
Advertisement
Advertisement

ಕಳೆದ ವಾರ ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ  ಐದು ಗೋದಾಮುಗಳಲ್ಲಿ  3.1 ಕೋಟಿ ಮೌಲ್ಯದ ಅಡಿಕೆಯನ್ನು ಪತ್ತೆ ಮಾಡಿ 31 ಲಕ್ಷ ತೆರಿಗೆ ವಿಧಿಸಿದ್ದರು. ಅದಕ್ಕೂ ಮೊದಲು ಮಂಗಳೂರು ಸೇರಿದಂತೆ ವಿವಿದೆಡೆ ದಾಳಿ ನಡೆಸಿದ ತೆರಿಗೆ ಇಲಾಖಾ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

Advertisement

ಕಳೆದ ಕೆಲವು ಸಮಯಗಳಿಂದ ಅಡಿಕೆಯನ್ನು  ಸೂಕ್ತವಾದ ದಾಖಲೆಗಳಿಲ್ಲ ಸಾಗಾಟ ಮಾಡುವುದು ಹಾಗೂ ಸಂಗ್ರಹ ಮಾಡಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ  ಈ ದಾಳಿ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಶಿವಮೊಗ್ಗ , ಸಾಗರದಲ್ಲಿಯೂ ಕೂಡಾ ದೊಡ್ಡ ಪ್ರಮಾಣದಲ್ಲಿ ಅಡಿಕೆ ದಾಸ್ತಾನು ಇರುವುದರ ಬಗ್ಗೆ ಖಚಿತ ವರ್ತಮಾನದ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಬುಧವಾರ ಮುಂಜಾನೆ ಶಿವಮೊಗ್ಗದ ಒಂಬತ್ತು ಸ್ಥಳಗಳಲ್ಲಿ ಮತ್ತು ಸಾಗರದ  ನಾಲ್ಕು ಸ್ಥಳಗಳಲ್ಲಿ ದಾಳಿ ನಡೆಸಿದ್ದರು. ತೆರಿಗೆ ತಪ್ಪಿಸಿ ಅಡಿಕೆ ಸಾಗಾಟ ಮಾಡುವ ಹಾಗೂ ಅಡಿಕೆ ಗ್ರೇಡ್ ಗಳಲ್ಲಿ ವಂಚನೆ ಬಗ್ಗೆಯೂ ತೆರಿಗೆ ಇಲಾಖೆಯ ಅಧಿಕಾರಿಗಳು ನಿಗಾ ಇರಿಸಿದ್ದಾರೆ ಎಂದು ತಿಳಿದುಬಂದಿದೆ.

 

Advertisement

 

 

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಂಕುರಿತ ಕಾಳುಗಳನ್ನು ಹೇಗೆ ಬಳಸುವುದು? : ಅತಿಯಾದ ಮೊಳಕೆ ಅಪಾಯಕಾರಿಯೆ?
April 20, 2024
5:19 PM
by: The Rural Mirror ಸುದ್ದಿಜಾಲ
ಪರಿಸರ ಸ್ನೇಹಿ ಕೈಚೀಲಗಳ ಕುರಿತು ಒಂದಿಷ್ಟು ಮಾಹಿತಿ ನಿಮಗಾಗಿ : ನಮ್ಮ ದೇಶದ ಡಿಫೆನ್ಸ್ ರೀಸರ್ಚ ಡೆವಲಪ್ಮೆಂಟ್ ಸೆಂಟರ್‌ನಿಂದ ತಯಾರಿ
April 20, 2024
5:07 PM
by: The Rural Mirror ಸುದ್ದಿಜಾಲ
ಭೂ ಅಂತರ್ಗತ ನೀರಿನ ಒರತೆಗಳು.. ಮೇಲ್ಮೈ ಒರತೆ ಮತ್ತುಶಿಲಾಸ್ತರದ ನಡುವಣ… : ಸಮುದ್ರ ಸೇರುವ ನೀರು ವ್ಯರ್ಥವೇ ? ಖಂಡಿತ ಅಲ್ಲ.
April 20, 2024
4:46 PM
by: The Rural Mirror ಸುದ್ದಿಜಾಲ
ರಕ್ಷಣಾ ವಲಯದಲ್ಲಿ ಭಾರದ ಸಾಧನೆ : ಫಿಲಿಪೈನ್ಸ್‌ಗೆ ಭಾರತದ ಬ್ರಹ್ಮೋಸ್ ರಫ್ತು : ಬೇರೆ ರಾಷ್ಟ್ರಗಳಿಂದ ಹೆಚ್ಚಿದ ಬೇಡಿಕೆ
April 20, 2024
3:14 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror