ತೆರಿಗೆ ತಪ್ಪಿಸಿ ಅಡಿಕೆ ಸಾಗಾಟಕ್ಕೆ ಯತ್ನ | ತೆರಿಗೆ ಇಲಾಖಾ ಅಧಿಕಾರಿಗಳಿಂದ ದಾಳಿ | 1 ಕೋಟಿಗೂ ಅಧಿಕ ದಂಡ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ವಾಣಿಜ್ಯ ತೆರಿಗೆ ಇಲಾಖಾ ಅಧಿಕಾರಿಗಳು ಕಳೆದ ಕೆಲವು ದಿನಗಳಿಂದ ಅಡಿಕೆ ಸಾಗಾಟದ ಮೇಲೆ ನಿಗಾ ಇರಿಸಿದ್ದಾರೆ. ಇದೀಗ  ಶಿವಮೊಗ್ಗ ಮತ್ತು ಸಾಗರ ದಲ್ಲಿ ಬುಧವಾರ 13 ಸ್ಥಳಗಳಲ್ಲಿ  ನಡೆಸಿದ ಕಾರ್ಯಾಚರಣೆಯಲ್ಲಿ  11 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಅನಧಿಕೃತವಾಗಿ ಸಂಗ್ರಹಿಸಿದ್ದನ್ನು  ಪತ್ತೆ ಮಾಡಿದ್ದು ಜಿಎಸ್‌ಟಿ ಅಡಿಯಲ್ಲಿ  1.1 ಕೋಟಿ ತೆರಿಗೆ ಮತ್ತು ದಂಡವನ್ನು ವಿಧಿಸಿದ್ದಾರೆ.

Advertisement
Advertisement

ಕಳೆದ ವಾರ ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ  ಐದು ಗೋದಾಮುಗಳಲ್ಲಿ  3.1 ಕೋಟಿ ಮೌಲ್ಯದ ಅಡಿಕೆಯನ್ನು ಪತ್ತೆ ಮಾಡಿ 31 ಲಕ್ಷ ತೆರಿಗೆ ವಿಧಿಸಿದ್ದರು. ಅದಕ್ಕೂ ಮೊದಲು ಮಂಗಳೂರು ಸೇರಿದಂತೆ ವಿವಿದೆಡೆ ದಾಳಿ ನಡೆಸಿದ ತೆರಿಗೆ ಇಲಾಖಾ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

ಕಳೆದ ಕೆಲವು ಸಮಯಗಳಿಂದ ಅಡಿಕೆಯನ್ನು  ಸೂಕ್ತವಾದ ದಾಖಲೆಗಳಿಲ್ಲ ಸಾಗಾಟ ಮಾಡುವುದು ಹಾಗೂ ಸಂಗ್ರಹ ಮಾಡಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ  ಈ ದಾಳಿ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಶಿವಮೊಗ್ಗ , ಸಾಗರದಲ್ಲಿಯೂ ಕೂಡಾ ದೊಡ್ಡ ಪ್ರಮಾಣದಲ್ಲಿ ಅಡಿಕೆ ದಾಸ್ತಾನು ಇರುವುದರ ಬಗ್ಗೆ ಖಚಿತ ವರ್ತಮಾನದ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಬುಧವಾರ ಮುಂಜಾನೆ ಶಿವಮೊಗ್ಗದ ಒಂಬತ್ತು ಸ್ಥಳಗಳಲ್ಲಿ ಮತ್ತು ಸಾಗರದ  ನಾಲ್ಕು ಸ್ಥಳಗಳಲ್ಲಿ ದಾಳಿ ನಡೆಸಿದ್ದರು. ತೆರಿಗೆ ತಪ್ಪಿಸಿ ಅಡಿಕೆ ಸಾಗಾಟ ಮಾಡುವ ಹಾಗೂ ಅಡಿಕೆ ಗ್ರೇಡ್ ಗಳಲ್ಲಿ ವಂಚನೆ ಬಗ್ಗೆಯೂ ತೆರಿಗೆ ಇಲಾಖೆಯ ಅಧಿಕಾರಿಗಳು ನಿಗಾ ಇರಿಸಿದ್ದಾರೆ ಎಂದು ತಿಳಿದುಬಂದಿದೆ.

 

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

11 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

1 day ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

1 day ago