ಮಂಗಳೂರು: ವಾಣಿಜ್ಯ ತೆರಿಗೆ ಇಲಾಖಾ ಅಧಿಕಾರಿಗಳು ಕಳೆದ ಕೆಲವು ದಿನಗಳಿಂದ ಅಡಿಕೆ ಸಾಗಾಟದ ಮೇಲೆ ನಿಗಾ ಇರಿಸಿದ್ದಾರೆ. ಇದೀಗ ಶಿವಮೊಗ್ಗ ಮತ್ತು ಸಾಗರ ದಲ್ಲಿ ಬುಧವಾರ 13 ಸ್ಥಳಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 11 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಅನಧಿಕೃತವಾಗಿ ಸಂಗ್ರಹಿಸಿದ್ದನ್ನು ಪತ್ತೆ ಮಾಡಿದ್ದು ಜಿಎಸ್ಟಿ ಅಡಿಯಲ್ಲಿ 1.1 ಕೋಟಿ ತೆರಿಗೆ ಮತ್ತು ದಂಡವನ್ನು ವಿಧಿಸಿದ್ದಾರೆ.
ಕಳೆದ ವಾರ ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಐದು ಗೋದಾಮುಗಳಲ್ಲಿ 3.1 ಕೋಟಿ ಮೌಲ್ಯದ ಅಡಿಕೆಯನ್ನು ಪತ್ತೆ ಮಾಡಿ 31 ಲಕ್ಷ ತೆರಿಗೆ ವಿಧಿಸಿದ್ದರು. ಅದಕ್ಕೂ ಮೊದಲು ಮಂಗಳೂರು ಸೇರಿದಂತೆ ವಿವಿದೆಡೆ ದಾಳಿ ನಡೆಸಿದ ತೆರಿಗೆ ಇಲಾಖಾ ಅಧಿಕಾರಿಗಳು ದಂಡ ವಿಧಿಸಿದ್ದಾರೆ.
ಕಳೆದ ಕೆಲವು ಸಮಯಗಳಿಂದ ಅಡಿಕೆಯನ್ನು ಸೂಕ್ತವಾದ ದಾಖಲೆಗಳಿಲ್ಲ ಸಾಗಾಟ ಮಾಡುವುದು ಹಾಗೂ ಸಂಗ್ರಹ ಮಾಡಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಶಿವಮೊಗ್ಗ , ಸಾಗರದಲ್ಲಿಯೂ ಕೂಡಾ ದೊಡ್ಡ ಪ್ರಮಾಣದಲ್ಲಿ ಅಡಿಕೆ ದಾಸ್ತಾನು ಇರುವುದರ ಬಗ್ಗೆ ಖಚಿತ ವರ್ತಮಾನದ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಬುಧವಾರ ಮುಂಜಾನೆ ಶಿವಮೊಗ್ಗದ ಒಂಬತ್ತು ಸ್ಥಳಗಳಲ್ಲಿ ಮತ್ತು ಸಾಗರದ ನಾಲ್ಕು ಸ್ಥಳಗಳಲ್ಲಿ ದಾಳಿ ನಡೆಸಿದ್ದರು. ತೆರಿಗೆ ತಪ್ಪಿಸಿ ಅಡಿಕೆ ಸಾಗಾಟ ಮಾಡುವ ಹಾಗೂ ಅಡಿಕೆ ಗ್ರೇಡ್ ಗಳಲ್ಲಿ ವಂಚನೆ ಬಗ್ಗೆಯೂ ತೆರಿಗೆ ಇಲಾಖೆಯ ಅಧಿಕಾರಿಗಳು ನಿಗಾ ಇರಿಸಿದ್ದಾರೆ ಎಂದು ತಿಳಿದುಬಂದಿದೆ.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…