ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಸಹ ಪೈಲಟ್ ಆಗಿ ಸ್ವದೇಶಿ ನಿರ್ವಿುತ ಲಘು ಯುದ್ಧವಿಮಾನ ತೇಜಸ್ನಲ್ಲಿ ಹಾರಾಟ ನಡೆಸಿದರು. ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದಿಂದ ಹೊರಟು ಅವರು ತೇಜಸ್ ನಲ್ಲಿ ಸುಮಾರು ಅರ್ಧ ಗಂಟೆಗಳ ಕಾಲ ಹಾರಾಟ ನಡೆಸಿದರು. ಆ ಮೂಲಕ ತೇಜಸ್ನಲ್ಲಿ ಹಾರಾಟ ನಡೆಸಿದ ಮೊದಲ ರಕ್ಷಣಾ ಸಚಿವ ಎಂಬ ಹಿರಿಮೆಗೆ ಪಾತ್ರರಾದರು.
‘ನನ್ನ ಜೀವನದಲ್ಲಿ ಇದೊಂದು ವಿಶೇಷವಾದ ದಿನ. ನಾನು ಮೊದಲ ಬಾರಿಗೆ ರಕ್ಷಣಾ ಸಚಿವನಾಗಿದ್ದೇನೆ. ನಮ್ಮ ಸ್ವದೇಶಿ ನಿರ್ವಣದ ತೇಜಸ್ನ ಸಾಮರ್ಥ್ಯ ಬಗ್ಗೆ ತಿಳಿದುಕೊಳ್ಳುವ ಕುತೂಹಲ ಇದ್ದರಿಂದ ಹಾರಾಟ ನಡೆಸಿದ್ದೇನೆ. ಯುದ್ಧ ವಿಮಾನದಲ್ಲಿ ಹಾರಾಟ ನಡೆಸಲು ನಮ್ಮ ಸೈನಿಕರಲ್ಲಿರುವ ಸ್ಥೈರ್ಯ, ಧೈರ್ಯ ನೋಡಿ ಖುಷಿಯಾಗಿದೆ. ತೇಜಸ್ ನಿರ್ವಣಕ್ಕೆ ಕೈ ಜೋಡಿಸಿರುವ ಎಚ್ಎಎಲ್, ಎಡಿಎ, ಡಿಆರ್ಡಿಒ ಸಂಸ್ಥೆಗೆ ಸಚಿವರು ಅಭಿನಂದನೆ ತಿಳಿಸಿದರು.
ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಒಟ್ಟು ಎರಡು ತೇಜಸ್ ಯುದ್ಧ ವಿಮಾನಗಳನ್ನು ತರಲಾಗಿತ್ತು. ಅದರಲ್ಲಿ ಟ್ರೖೆನರ್ ಜೆಟ್ ಫೈಟರ್ನಲ್ಲಿ ರಾಜನಾಥ್ ಸಿಂಗ್ ಹಾರಾಟ ನಡೆಸಿದರು.
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…