ಅರಂತೋಡು: ತೊಡಿಕಾನ ಬಿ.ಎಸ್.ಎನ್.ಎಲ್ ಟವರ್ ಆಗಾಗ ಸ್ತಬ್ದವಾಗುತ್ತಿದೆ. ಹೀಗಾಗಿ ಗ್ರಾಹಕರು ಬದಲಿ ವ್ಯವಸ್ಥೆಗಳಿಲ್ಲದೆ ಸಮಸ್ಯೆಗೊಳಗಾಗಿದ್ದಾರೆ.
ಈಚೆಗೆ ನಿರಂತರವಾಗಿ ನಾಲ್ಕು ದಿವಸಗಳಿಂದ ತೊಡಿಕಾನ ಬಿ.ಎಸ್.ಎನ್.ಎಲ್ ನಿಷ್ಕ್ರಿಯಗೊಂಡಿತ್ತು.ಇದರಿಂದ ಬಿ.ಎಸ್.ಎನ್ಎಲ್ಗೆ ಗ್ರಾಹಕರು ಹಿಡಿಶಾಪ ಹಾಕುವಂತಾಗಿದೆ.ಈ ಟವರ್ ತೊಡಿಕಾನ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಕಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ. ಟವರ್ ಅನೇಕ ವರ್ಷಗಳಿಂದ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಗ್ರಾಹಕರು ದೂರುತ್ತಿದ್ದಾರೆ.ಮೊದಲು ವಿದ್ಯುತ್ ಇರುವ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿತ್ತು.ವಿದ್ಯುತ್ ಇಲ್ಲದ ಸಂದರ್ಭ ಟವರ್ ಕೈ ಕೊಡುತ್ತಿತ್ತು.ಈಚೆಗೆ ನಾಲ್ಕು ದಿವಸಗಳ ಕಾಲ ಟವರ್ ಸ್ತಬ್ದಗೊಂಡಿರುವುದರಿಂದ ಜನರು ಇನ್ನಷ್ಟು ಸಮಸ್ಯೆಗೆ ಒಳಗಾಗಿದ್ದಾರೆ.
ಬದಲಿ ವ್ಯವಸ್ಥೆ ಇಲ್ಲ: ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯ ವ್ಯಾಪ್ತಿಯಲ್ಲಿ ಬಿ.ಎಸ್.ಎನ್ ಎಲ್ ಟವರ್ ಹೊರತು ಪಡಿಸಿ ಯಾವುದೇ ಖಾಸಗಿ ಪೋನ್ ಟವರ್ ಗಳಿಲ್ಲ.ಅಲ್ಲದೆ ಈ ಟವರ್ ಇತರ ಖಾಸಗಿ ಪೋನ್ ಸಂಪರ್ಕವಾಗಿಲ್ಲ. ತೊಡಿಕಾನದಲ್ಲಿ ಅತೀ ಪುರಾತನ ಶ್ರೀ ಮಲ್ಲಿಕಾರ್ಜುನ ದೇವಾಯವಿದ್ದು ಇಲ್ಲಿಗೆ ಅನೇಕ ಭಕ್ತಾಧಿಗಳು ಆಗಮಿಸುತ್ತಿದ್ದಾರೆ. ದೇವಾಲಯಗಳಿಗೆ ಬರುವ ಭಕ್ತಾಧಿಗಳಿಗೆ ಮೊಬೈಲ್ ಸಂಪರ್ಕ ಸಾಧ್ಯವಾಗದ ಹಿನ್ನಲೆಯಲ್ಲಿ ಭಕ್ತಾಧಿಗಳಿಗೂ ಸಮಸ್ಯೆಯಾಗಿ ಪರಿಣಮಿಸಿದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…