Advertisement
Categories: Uncategorized

ತೊಡಿಕಾನ : ಆಗಾಗ ಕೈಕೊಡುವ ಬಿಎಸ್ಎನ್ಎಲ್ ಟವರ್ – ಬದಲಿ ವ್ಯವಸ್ಥೆಗಳಿಲ್ಲದೆ ಜನರ ಪರದಾಟ

Share

ಅರಂತೋಡು: ತೊಡಿಕಾನ ಬಿ.ಎಸ್.ಎನ್.ಎಲ್ ಟವರ್ ಆಗಾಗ ಸ್ತಬ್ದವಾಗುತ್ತಿದೆ. ಹೀಗಾಗಿ ಗ್ರಾಹಕರು ಬದಲಿ ವ್ಯವಸ್ಥೆಗಳಿಲ್ಲದೆ ಸಮಸ್ಯೆಗೊಳಗಾಗಿದ್ದಾರೆ.

ಈಚೆಗೆ ನಿರಂತರವಾಗಿ ನಾಲ್ಕು ದಿವಸಗಳಿಂದ ತೊಡಿಕಾನ ಬಿ.ಎಸ್.ಎನ್.ಎಲ್ ನಿಷ್ಕ್ರಿಯಗೊಂಡಿತ್ತು.ಇದರಿಂದ ಬಿ.ಎಸ್.ಎನ್‍ಎಲ್‍ಗೆ ಗ್ರಾಹಕರು ಹಿಡಿಶಾಪ ಹಾಕುವಂತಾಗಿದೆ.ಈ ಟವರ್ ತೊಡಿಕಾನ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಕಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ. ಟವರ್ ಅನೇಕ ವರ್ಷಗಳಿಂದ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಗ್ರಾಹಕರು ದೂರುತ್ತಿದ್ದಾರೆ.ಮೊದಲು ವಿದ್ಯುತ್ ಇರುವ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿತ್ತು.ವಿದ್ಯುತ್ ಇಲ್ಲದ ಸಂದರ್ಭ ಟವರ್ ಕೈ ಕೊಡುತ್ತಿತ್ತು.ಈಚೆಗೆ ನಾಲ್ಕು ದಿವಸಗಳ ಕಾಲ  ಟವರ್ ಸ್ತಬ್ದಗೊಂಡಿರುವುದರಿಂದ ಜನರು ಇನ್ನಷ್ಟು ಸಮಸ್ಯೆಗೆ ಒಳಗಾಗಿದ್ದಾರೆ.

ಬದಲಿ ವ್ಯವಸ್ಥೆ ಇಲ್ಲ: ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯ ವ್ಯಾಪ್ತಿಯಲ್ಲಿ ಬಿ.ಎಸ್.ಎನ್ ಎಲ್ ಟವರ್ ಹೊರತು ಪಡಿಸಿ ಯಾವುದೇ ಖಾಸಗಿ ಪೋನ್ ಟವರ್ ಗಳಿಲ್ಲ.ಅಲ್ಲದೆ ಈ ಟವರ್ ಇತರ ಖಾಸಗಿ ಪೋನ್ ಸಂಪರ್ಕವಾಗಿಲ್ಲ. ತೊಡಿಕಾನದಲ್ಲಿ ಅತೀ ಪುರಾತನ ಶ್ರೀ ಮಲ್ಲಿಕಾರ್ಜುನ ದೇವಾಯವಿದ್ದು ಇಲ್ಲಿಗೆ ಅನೇಕ ಭಕ್ತಾಧಿಗಳು  ಆಗಮಿಸುತ್ತಿದ್ದಾರೆ. ದೇವಾಲಯಗಳಿಗೆ ಬರುವ ಭಕ್ತಾಧಿಗಳಿಗೆ ಮೊಬೈಲ್ ಸಂಪರ್ಕ ಸಾಧ್ಯವಾಗದ ಹಿನ್ನಲೆಯಲ್ಲಿ ಭಕ್ತಾಧಿಗಳಿಗೂ ಸಮಸ್ಯೆಯಾಗಿ ಪರಿಣಮಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

1 day ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 day ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 day ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

1 day ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

2 days ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago