Advertisement
Categories: Uncategorized

ತೊಡಿಕಾನ : ಆಗಾಗ ಕೈಕೊಡುವ ಬಿಎಸ್ಎನ್ಎಲ್ ಟವರ್ – ಬದಲಿ ವ್ಯವಸ್ಥೆಗಳಿಲ್ಲದೆ ಜನರ ಪರದಾಟ

Share

ಅರಂತೋಡು: ತೊಡಿಕಾನ ಬಿ.ಎಸ್.ಎನ್.ಎಲ್ ಟವರ್ ಆಗಾಗ ಸ್ತಬ್ದವಾಗುತ್ತಿದೆ. ಹೀಗಾಗಿ ಗ್ರಾಹಕರು ಬದಲಿ ವ್ಯವಸ್ಥೆಗಳಿಲ್ಲದೆ ಸಮಸ್ಯೆಗೊಳಗಾಗಿದ್ದಾರೆ.

ಈಚೆಗೆ ನಿರಂತರವಾಗಿ ನಾಲ್ಕು ದಿವಸಗಳಿಂದ ತೊಡಿಕಾನ ಬಿ.ಎಸ್.ಎನ್.ಎಲ್ ನಿಷ್ಕ್ರಿಯಗೊಂಡಿತ್ತು.ಇದರಿಂದ ಬಿ.ಎಸ್.ಎನ್‍ಎಲ್‍ಗೆ ಗ್ರಾಹಕರು ಹಿಡಿಶಾಪ ಹಾಕುವಂತಾಗಿದೆ.ಈ ಟವರ್ ತೊಡಿಕಾನ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಕಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ. ಟವರ್ ಅನೇಕ ವರ್ಷಗಳಿಂದ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಗ್ರಾಹಕರು ದೂರುತ್ತಿದ್ದಾರೆ.ಮೊದಲು ವಿದ್ಯುತ್ ಇರುವ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿತ್ತು.ವಿದ್ಯುತ್ ಇಲ್ಲದ ಸಂದರ್ಭ ಟವರ್ ಕೈ ಕೊಡುತ್ತಿತ್ತು.ಈಚೆಗೆ ನಾಲ್ಕು ದಿವಸಗಳ ಕಾಲ  ಟವರ್ ಸ್ತಬ್ದಗೊಂಡಿರುವುದರಿಂದ ಜನರು ಇನ್ನಷ್ಟು ಸಮಸ್ಯೆಗೆ ಒಳಗಾಗಿದ್ದಾರೆ.

ಬದಲಿ ವ್ಯವಸ್ಥೆ ಇಲ್ಲ: ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯ ವ್ಯಾಪ್ತಿಯಲ್ಲಿ ಬಿ.ಎಸ್.ಎನ್ ಎಲ್ ಟವರ್ ಹೊರತು ಪಡಿಸಿ ಯಾವುದೇ ಖಾಸಗಿ ಪೋನ್ ಟವರ್ ಗಳಿಲ್ಲ.ಅಲ್ಲದೆ ಈ ಟವರ್ ಇತರ ಖಾಸಗಿ ಪೋನ್ ಸಂಪರ್ಕವಾಗಿಲ್ಲ. ತೊಡಿಕಾನದಲ್ಲಿ ಅತೀ ಪುರಾತನ ಶ್ರೀ ಮಲ್ಲಿಕಾರ್ಜುನ ದೇವಾಯವಿದ್ದು ಇಲ್ಲಿಗೆ ಅನೇಕ ಭಕ್ತಾಧಿಗಳು  ಆಗಮಿಸುತ್ತಿದ್ದಾರೆ. ದೇವಾಲಯಗಳಿಗೆ ಬರುವ ಭಕ್ತಾಧಿಗಳಿಗೆ ಮೊಬೈಲ್ ಸಂಪರ್ಕ ಸಾಧ್ಯವಾಗದ ಹಿನ್ನಲೆಯಲ್ಲಿ ಭಕ್ತಾಧಿಗಳಿಗೂ ಸಮಸ್ಯೆಯಾಗಿ ಪರಿಣಮಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

5 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

13 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

16 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

21 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

2 days ago