Advertisement
Categories: Uncategorized

ತೊಡಿಕಾನ : ಆಗಾಗ ಕೈಕೊಡುವ ಬಿಎಸ್ಎನ್ಎಲ್ ಟವರ್ – ಬದಲಿ ವ್ಯವಸ್ಥೆಗಳಿಲ್ಲದೆ ಜನರ ಪರದಾಟ

Share

ಅರಂತೋಡು: ತೊಡಿಕಾನ ಬಿ.ಎಸ್.ಎನ್.ಎಲ್ ಟವರ್ ಆಗಾಗ ಸ್ತಬ್ದವಾಗುತ್ತಿದೆ. ಹೀಗಾಗಿ ಗ್ರಾಹಕರು ಬದಲಿ ವ್ಯವಸ್ಥೆಗಳಿಲ್ಲದೆ ಸಮಸ್ಯೆಗೊಳಗಾಗಿದ್ದಾರೆ.

ಈಚೆಗೆ ನಿರಂತರವಾಗಿ ನಾಲ್ಕು ದಿವಸಗಳಿಂದ ತೊಡಿಕಾನ ಬಿ.ಎಸ್.ಎನ್.ಎಲ್ ನಿಷ್ಕ್ರಿಯಗೊಂಡಿತ್ತು.ಇದರಿಂದ ಬಿ.ಎಸ್.ಎನ್‍ಎಲ್‍ಗೆ ಗ್ರಾಹಕರು ಹಿಡಿಶಾಪ ಹಾಕುವಂತಾಗಿದೆ.ಈ ಟವರ್ ತೊಡಿಕಾನ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಕಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ. ಟವರ್ ಅನೇಕ ವರ್ಷಗಳಿಂದ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಗ್ರಾಹಕರು ದೂರುತ್ತಿದ್ದಾರೆ.ಮೊದಲು ವಿದ್ಯುತ್ ಇರುವ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿತ್ತು.ವಿದ್ಯುತ್ ಇಲ್ಲದ ಸಂದರ್ಭ ಟವರ್ ಕೈ ಕೊಡುತ್ತಿತ್ತು.ಈಚೆಗೆ ನಾಲ್ಕು ದಿವಸಗಳ ಕಾಲ  ಟವರ್ ಸ್ತಬ್ದಗೊಂಡಿರುವುದರಿಂದ ಜನರು ಇನ್ನಷ್ಟು ಸಮಸ್ಯೆಗೆ ಒಳಗಾಗಿದ್ದಾರೆ.

ಬದಲಿ ವ್ಯವಸ್ಥೆ ಇಲ್ಲ: ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯ ವ್ಯಾಪ್ತಿಯಲ್ಲಿ ಬಿ.ಎಸ್.ಎನ್ ಎಲ್ ಟವರ್ ಹೊರತು ಪಡಿಸಿ ಯಾವುದೇ ಖಾಸಗಿ ಪೋನ್ ಟವರ್ ಗಳಿಲ್ಲ.ಅಲ್ಲದೆ ಈ ಟವರ್ ಇತರ ಖಾಸಗಿ ಪೋನ್ ಸಂಪರ್ಕವಾಗಿಲ್ಲ. ತೊಡಿಕಾನದಲ್ಲಿ ಅತೀ ಪುರಾತನ ಶ್ರೀ ಮಲ್ಲಿಕಾರ್ಜುನ ದೇವಾಯವಿದ್ದು ಇಲ್ಲಿಗೆ ಅನೇಕ ಭಕ್ತಾಧಿಗಳು  ಆಗಮಿಸುತ್ತಿದ್ದಾರೆ. ದೇವಾಲಯಗಳಿಗೆ ಬರುವ ಭಕ್ತಾಧಿಗಳಿಗೆ ಮೊಬೈಲ್ ಸಂಪರ್ಕ ಸಾಧ್ಯವಾಗದ ಹಿನ್ನಲೆಯಲ್ಲಿ ಭಕ್ತಾಧಿಗಳಿಗೂ ಸಮಸ್ಯೆಯಾಗಿ ಪರಿಣಮಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

17 minutes ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

1 hour ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

1 hour ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

7 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

9 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

14 hours ago