Advertisement
Categories: Uncategorized

ತೊಡಿಕಾನ : ಆಗಾಗ ಕೈಕೊಡುವ ಬಿಎಸ್ಎನ್ಎಲ್ ಟವರ್ – ಬದಲಿ ವ್ಯವಸ್ಥೆಗಳಿಲ್ಲದೆ ಜನರ ಪರದಾಟ

Share

ಅರಂತೋಡು: ತೊಡಿಕಾನ ಬಿ.ಎಸ್.ಎನ್.ಎಲ್ ಟವರ್ ಆಗಾಗ ಸ್ತಬ್ದವಾಗುತ್ತಿದೆ. ಹೀಗಾಗಿ ಗ್ರಾಹಕರು ಬದಲಿ ವ್ಯವಸ್ಥೆಗಳಿಲ್ಲದೆ ಸಮಸ್ಯೆಗೊಳಗಾಗಿದ್ದಾರೆ.

ಈಚೆಗೆ ನಿರಂತರವಾಗಿ ನಾಲ್ಕು ದಿವಸಗಳಿಂದ ತೊಡಿಕಾನ ಬಿ.ಎಸ್.ಎನ್.ಎಲ್ ನಿಷ್ಕ್ರಿಯಗೊಂಡಿತ್ತು.ಇದರಿಂದ ಬಿ.ಎಸ್.ಎನ್‍ಎಲ್‍ಗೆ ಗ್ರಾಹಕರು ಹಿಡಿಶಾಪ ಹಾಕುವಂತಾಗಿದೆ.ಈ ಟವರ್ ತೊಡಿಕಾನ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಕಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ. ಟವರ್ ಅನೇಕ ವರ್ಷಗಳಿಂದ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಗ್ರಾಹಕರು ದೂರುತ್ತಿದ್ದಾರೆ.ಮೊದಲು ವಿದ್ಯುತ್ ಇರುವ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿತ್ತು.ವಿದ್ಯುತ್ ಇಲ್ಲದ ಸಂದರ್ಭ ಟವರ್ ಕೈ ಕೊಡುತ್ತಿತ್ತು.ಈಚೆಗೆ ನಾಲ್ಕು ದಿವಸಗಳ ಕಾಲ  ಟವರ್ ಸ್ತಬ್ದಗೊಂಡಿರುವುದರಿಂದ ಜನರು ಇನ್ನಷ್ಟು ಸಮಸ್ಯೆಗೆ ಒಳಗಾಗಿದ್ದಾರೆ.

ಬದಲಿ ವ್ಯವಸ್ಥೆ ಇಲ್ಲ: ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯ ವ್ಯಾಪ್ತಿಯಲ್ಲಿ ಬಿ.ಎಸ್.ಎನ್ ಎಲ್ ಟವರ್ ಹೊರತು ಪಡಿಸಿ ಯಾವುದೇ ಖಾಸಗಿ ಪೋನ್ ಟವರ್ ಗಳಿಲ್ಲ.ಅಲ್ಲದೆ ಈ ಟವರ್ ಇತರ ಖಾಸಗಿ ಪೋನ್ ಸಂಪರ್ಕವಾಗಿಲ್ಲ. ತೊಡಿಕಾನದಲ್ಲಿ ಅತೀ ಪುರಾತನ ಶ್ರೀ ಮಲ್ಲಿಕಾರ್ಜುನ ದೇವಾಯವಿದ್ದು ಇಲ್ಲಿಗೆ ಅನೇಕ ಭಕ್ತಾಧಿಗಳು  ಆಗಮಿಸುತ್ತಿದ್ದಾರೆ. ದೇವಾಲಯಗಳಿಗೆ ಬರುವ ಭಕ್ತಾಧಿಗಳಿಗೆ ಮೊಬೈಲ್ ಸಂಪರ್ಕ ಸಾಧ್ಯವಾಗದ ಹಿನ್ನಲೆಯಲ್ಲಿ ಭಕ್ತಾಧಿಗಳಿಗೂ ಸಮಸ್ಯೆಯಾಗಿ ಪರಿಣಮಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

1 hour ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

16 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

17 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

1 day ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

1 day ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

2 days ago