ತೋಟಗಾರಿಕಾ ಇಲಾಖೆಯಲ್ಲಿ ವಿವಿಧ ಸೌಲಭ್ಯ : ಬಾಳಿಲ ಗ್ರಾಮಸಭೆಯಲ್ಲಿ ಮಾಹಿತಿ ನೀಡಿದ ಅಧಿಕಾರಿ

August 16, 2019
6:07 PM

ಬೆಳ್ಳಾರೆ: ತೋಟಗಾರಿಕಾ ಇಲಾಖೆಯಲ್ಲಿ ಕೃಷಿಕರಿಗೆ ಲಭ್ಯವಾಗುವ ವಿವಿಧ ಯೋಜನೆ, ಸಹಾಯಗಳ ಬಗ್ಗೆ ತೋಟಗಾರಿಕಾ ಇಲಾಖಾ ಅಧಿಕಾರಿ ಬಾಳಿಲ ಗ್ರಾಮ ಪಂಚಾಯತ್ ಗ್ರಾಮಸಭೆಯಲ್ಲಿ  ಮಾಹಿತಿ ನೀಡಿದರು.

Advertisement

ಬಾಳಿಲ ಗ್ರಾಮ ಪಂಚಾಯತ್ 2019-20ನೇ ಸಾಲಿನ ಮೊದಲ ಹಂತದ ಗ್ರಾಮಸಭೆ  ಗಿರಿಜನ ಆಶ್ರಮ ಶಾಲಾ ಸಭಾಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಿತು.

ತೋಟಗಾರಿಕಾ ಇಲಾಖಾಧಿಕಾರಿ ಮಾಹಿತಿ ನೀಡುತ್ತಾ ಬಾಳೆಕೃಷಿಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು. ಇಲಾಖೆ ವತಿಯಿಂದ ಜೇನುಪೆಟ್ಟಿಗೆಗಳನ್ನು ಮತ್ತು ಅದಕ್ಕೆ 1600 ರೂಪಾಯಿಗಳ ಭತ್ಯೆಯನ್ನು ನೀಡಲಾಗುವುದು. ಗೇರು ಕೃಷಿಗೆ ಹೆಕ್ಟೇರ್ ಒಂದಕ್ಕೆ 2800 ಭತ್ಯೆ ಹಾಗು ಗೇರು ಕೃಷಿಯಲ್ಲಿ ಎರಡುವರೆ ಹೆಕ್ಟೇರ್‍ಗೆ 25ಸಾವಿರ ಮೊದಲ ವರ್ಷಕ್ಕೆ ಅನುದಾನ ನೀಡಲಾಗುತ್ತದೆ. ಶೇ33%ಕ್ಕಿಂತ ಹೆಚ್ಚಿನ ಅಡಕೆ ಮರಗಳು ಮುರಿದ್ದಿದ್ದರೆ ಹೆಕ್ಟೇರ್‍ಗೆ 18 ಸಾವಿರ ಸಹಾಯಧನ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಫಸಲ್‍ಭೀಮಾ ಯೋಜನೆ ಕುರಿತು ಪ್ರಶ್ನಿಸಿದ್ದ ಗ್ರಾಮಸ್ಥರೊಬ್ಬರಿಗೆ ಉತ್ತರಿಸಿದ ತೋಟಗಾರಿಕಾಧಿಕಾರಿ ಹವಾಮಾನಕ್ಕನುಗುಣವಾಗಿ ಯೋಜನೆಯ ಫಲವನ್ನು ವಿತರಿಸಲಾಗುತ್ತದೆ ಎಂದರು.

ಆರೋಗ್ಯ ಇಲಾಖಾಧಿಕಾರಿ ಮಾಹಿತಿ ನೀಡುತ್ತಾ ಸಾಂಕ್ರಾಮಿಕ ರೋಗಗಳ ಕುರಿತು ಎಚ್ಚರಿಸಿದರು. ಗ್ರಾಮೀಣ ಭಾಗದಲ್ಲಿ ಹೆರಿಗೆಯಾದವರಿಗೆ ಸೌಲಭ್ಯ ಹಾಗು 6000 ಸಾವಿರ ಮಾತೃ ಮಾಸಾಶನದ ಕುರಿತು ಮಾಹಿತಿ ನೀಡಿದರು.

ವೇದಿಕೆಯಲ್ಲಿ ನೊಡೆಲ್ ಅಧಿಕಾರಿ ವೀಣಾ ಎಂ.ಟಿ, ಕಂದಾಯ ಇಲಾಖಾಧಿಕಾರಿ, ಪಶು ಸಂಗೋಪನಾಧಿಕಾರಿ, ಮೆಸ್ಕಾಂ ಇಲಾಖಾಧಿಕಾರಿ, ಸುಳ್ಯ ತಾಲೂಕು ಪಂಚಾಯತ್ ಬಾಳಿಲ ಕ್ಷೇತ್ರದ ಸದಸ್ಯೆ ಜಾಹ್ನವಿ ಕಾಂಚೋಡು, ಬಾಳಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಹೇಮಾವತಿ ಕಾಯಾರ, ಸದಸ್ಯರಾದ ಯು.ರಾಧಾಕೃಷ್ಣ ರಾವ್, ರವೀಂದ್ರ ರೈ, ರಮೇಶ್ ರೈ ಉಪಸ್ಥಿತರಿದ್ದರು.

Advertisement

ವಾರ್ಷಿಕ ವರದಿಯನ್ನು ಸುಂದರ ವಾಚಿಸಿದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಚಂದ್ರಾವತಿ ಕಾರ್ಯಕ್ರಮ ನಿರೂಪಿಸಿದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ
July 12, 2025
11:32 AM
by: The Rural Mirror ಸುದ್ದಿಜಾಲ
ಶಕ್ತಿ ವಸತಿ ಶಾಲೆಯಲ್ಲಿ ಗುರು ಪೂರ್ಣಿಮೆ | ದೇವರು ಹಾಗೂ ಗುರು ಇಬ್ಬರೂ ಪೂಜೆಗೆ ಯೋಗ್ಯ
July 10, 2025
8:04 PM
by: The Rural Mirror ಸುದ್ದಿಜಾಲ
33 ಕೆವಿ ವಿದ್ಯುತ್‌ ಉಪಕೇಂದ್ರ | ತ್ವರಿತ ಕಾಮಗಾರಿಗೆ ಭಾಕಿಸಂ ಒತ್ತಾಯ
July 1, 2025
11:37 AM
by: The Rural Mirror ಸುದ್ದಿಜಾಲ
ಕೆಂಪು ಕಲ್ಲು ಅಲಭ್ಯತೆ | ಕೆಲಸ ಕಳಕೊಂಡಿರುವ ಕಟ್ಟಡ ಕಾರ್ಮಿಕರು | ನೆರವಿಗೆ ಧಾವಿಸಬೇಕೆಂದು ಕಾರ್ಮಿಕ ಸಚಿವರಿಗೆ ಮನವಿ
June 29, 2025
11:14 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group