Advertisement
ನಮ್ಮೂರ ಸುದ್ದಿ

ತೋಟಗಾರಿಕಾ ಇಲಾಖೆಯಲ್ಲಿ ವಿವಿಧ ಸೌಲಭ್ಯ : ಬಾಳಿಲ ಗ್ರಾಮಸಭೆಯಲ್ಲಿ ಮಾಹಿತಿ ನೀಡಿದ ಅಧಿಕಾರಿ

Share

ಬೆಳ್ಳಾರೆ: ತೋಟಗಾರಿಕಾ ಇಲಾಖೆಯಲ್ಲಿ ಕೃಷಿಕರಿಗೆ ಲಭ್ಯವಾಗುವ ವಿವಿಧ ಯೋಜನೆ, ಸಹಾಯಗಳ ಬಗ್ಗೆ ತೋಟಗಾರಿಕಾ ಇಲಾಖಾ ಅಧಿಕಾರಿ ಬಾಳಿಲ ಗ್ರಾಮ ಪಂಚಾಯತ್ ಗ್ರಾಮಸಭೆಯಲ್ಲಿ  ಮಾಹಿತಿ ನೀಡಿದರು.

ಬಾಳಿಲ ಗ್ರಾಮ ಪಂಚಾಯತ್ 2019-20ನೇ ಸಾಲಿನ ಮೊದಲ ಹಂತದ ಗ್ರಾಮಸಭೆ  ಗಿರಿಜನ ಆಶ್ರಮ ಶಾಲಾ ಸಭಾಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಿತು.

ತೋಟಗಾರಿಕಾ ಇಲಾಖಾಧಿಕಾರಿ ಮಾಹಿತಿ ನೀಡುತ್ತಾ ಬಾಳೆಕೃಷಿಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು. ಇಲಾಖೆ ವತಿಯಿಂದ ಜೇನುಪೆಟ್ಟಿಗೆಗಳನ್ನು ಮತ್ತು ಅದಕ್ಕೆ 1600 ರೂಪಾಯಿಗಳ ಭತ್ಯೆಯನ್ನು ನೀಡಲಾಗುವುದು. ಗೇರು ಕೃಷಿಗೆ ಹೆಕ್ಟೇರ್ ಒಂದಕ್ಕೆ 2800 ಭತ್ಯೆ ಹಾಗು ಗೇರು ಕೃಷಿಯಲ್ಲಿ ಎರಡುವರೆ ಹೆಕ್ಟೇರ್‍ಗೆ 25ಸಾವಿರ ಮೊದಲ ವರ್ಷಕ್ಕೆ ಅನುದಾನ ನೀಡಲಾಗುತ್ತದೆ. ಶೇ33%ಕ್ಕಿಂತ ಹೆಚ್ಚಿನ ಅಡಕೆ ಮರಗಳು ಮುರಿದ್ದಿದ್ದರೆ ಹೆಕ್ಟೇರ್‍ಗೆ 18 ಸಾವಿರ ಸಹಾಯಧನ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಫಸಲ್‍ಭೀಮಾ ಯೋಜನೆ ಕುರಿತು ಪ್ರಶ್ನಿಸಿದ್ದ ಗ್ರಾಮಸ್ಥರೊಬ್ಬರಿಗೆ ಉತ್ತರಿಸಿದ ತೋಟಗಾರಿಕಾಧಿಕಾರಿ ಹವಾಮಾನಕ್ಕನುಗುಣವಾಗಿ ಯೋಜನೆಯ ಫಲವನ್ನು ವಿತರಿಸಲಾಗುತ್ತದೆ ಎಂದರು.

ಆರೋಗ್ಯ ಇಲಾಖಾಧಿಕಾರಿ ಮಾಹಿತಿ ನೀಡುತ್ತಾ ಸಾಂಕ್ರಾಮಿಕ ರೋಗಗಳ ಕುರಿತು ಎಚ್ಚರಿಸಿದರು. ಗ್ರಾಮೀಣ ಭಾಗದಲ್ಲಿ ಹೆರಿಗೆಯಾದವರಿಗೆ ಸೌಲಭ್ಯ ಹಾಗು 6000 ಸಾವಿರ ಮಾತೃ ಮಾಸಾಶನದ ಕುರಿತು ಮಾಹಿತಿ ನೀಡಿದರು.

ವೇದಿಕೆಯಲ್ಲಿ ನೊಡೆಲ್ ಅಧಿಕಾರಿ ವೀಣಾ ಎಂ.ಟಿ, ಕಂದಾಯ ಇಲಾಖಾಧಿಕಾರಿ, ಪಶು ಸಂಗೋಪನಾಧಿಕಾರಿ, ಮೆಸ್ಕಾಂ ಇಲಾಖಾಧಿಕಾರಿ, ಸುಳ್ಯ ತಾಲೂಕು ಪಂಚಾಯತ್ ಬಾಳಿಲ ಕ್ಷೇತ್ರದ ಸದಸ್ಯೆ ಜಾಹ್ನವಿ ಕಾಂಚೋಡು, ಬಾಳಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಹೇಮಾವತಿ ಕಾಯಾರ, ಸದಸ್ಯರಾದ ಯು.ರಾಧಾಕೃಷ್ಣ ರಾವ್, ರವೀಂದ್ರ ರೈ, ರಮೇಶ್ ರೈ ಉಪಸ್ಥಿತರಿದ್ದರು.

ವಾರ್ಷಿಕ ವರದಿಯನ್ನು ಸುಂದರ ವಾಚಿಸಿದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಚಂದ್ರಾವತಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

10 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

11 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

14 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

18 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

18 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago