Advertisement
ನಮ್ಮೂರ ಸುದ್ದಿ

ತೋಟಗಾರಿಕಾ ಇಲಾಖೆಯಲ್ಲಿ ವಿವಿಧ ಸೌಲಭ್ಯ : ಬಾಳಿಲ ಗ್ರಾಮಸಭೆಯಲ್ಲಿ ಮಾಹಿತಿ ನೀಡಿದ ಅಧಿಕಾರಿ

Share

ಬೆಳ್ಳಾರೆ: ತೋಟಗಾರಿಕಾ ಇಲಾಖೆಯಲ್ಲಿ ಕೃಷಿಕರಿಗೆ ಲಭ್ಯವಾಗುವ ವಿವಿಧ ಯೋಜನೆ, ಸಹಾಯಗಳ ಬಗ್ಗೆ ತೋಟಗಾರಿಕಾ ಇಲಾಖಾ ಅಧಿಕಾರಿ ಬಾಳಿಲ ಗ್ರಾಮ ಪಂಚಾಯತ್ ಗ್ರಾಮಸಭೆಯಲ್ಲಿ  ಮಾಹಿತಿ ನೀಡಿದರು.

ಬಾಳಿಲ ಗ್ರಾಮ ಪಂಚಾಯತ್ 2019-20ನೇ ಸಾಲಿನ ಮೊದಲ ಹಂತದ ಗ್ರಾಮಸಭೆ  ಗಿರಿಜನ ಆಶ್ರಮ ಶಾಲಾ ಸಭಾಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಿತು.

ತೋಟಗಾರಿಕಾ ಇಲಾಖಾಧಿಕಾರಿ ಮಾಹಿತಿ ನೀಡುತ್ತಾ ಬಾಳೆಕೃಷಿಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು. ಇಲಾಖೆ ವತಿಯಿಂದ ಜೇನುಪೆಟ್ಟಿಗೆಗಳನ್ನು ಮತ್ತು ಅದಕ್ಕೆ 1600 ರೂಪಾಯಿಗಳ ಭತ್ಯೆಯನ್ನು ನೀಡಲಾಗುವುದು. ಗೇರು ಕೃಷಿಗೆ ಹೆಕ್ಟೇರ್ ಒಂದಕ್ಕೆ 2800 ಭತ್ಯೆ ಹಾಗು ಗೇರು ಕೃಷಿಯಲ್ಲಿ ಎರಡುವರೆ ಹೆಕ್ಟೇರ್‍ಗೆ 25ಸಾವಿರ ಮೊದಲ ವರ್ಷಕ್ಕೆ ಅನುದಾನ ನೀಡಲಾಗುತ್ತದೆ. ಶೇ33%ಕ್ಕಿಂತ ಹೆಚ್ಚಿನ ಅಡಕೆ ಮರಗಳು ಮುರಿದ್ದಿದ್ದರೆ ಹೆಕ್ಟೇರ್‍ಗೆ 18 ಸಾವಿರ ಸಹಾಯಧನ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಫಸಲ್‍ಭೀಮಾ ಯೋಜನೆ ಕುರಿತು ಪ್ರಶ್ನಿಸಿದ್ದ ಗ್ರಾಮಸ್ಥರೊಬ್ಬರಿಗೆ ಉತ್ತರಿಸಿದ ತೋಟಗಾರಿಕಾಧಿಕಾರಿ ಹವಾಮಾನಕ್ಕನುಗುಣವಾಗಿ ಯೋಜನೆಯ ಫಲವನ್ನು ವಿತರಿಸಲಾಗುತ್ತದೆ ಎಂದರು.

ಆರೋಗ್ಯ ಇಲಾಖಾಧಿಕಾರಿ ಮಾಹಿತಿ ನೀಡುತ್ತಾ ಸಾಂಕ್ರಾಮಿಕ ರೋಗಗಳ ಕುರಿತು ಎಚ್ಚರಿಸಿದರು. ಗ್ರಾಮೀಣ ಭಾಗದಲ್ಲಿ ಹೆರಿಗೆಯಾದವರಿಗೆ ಸೌಲಭ್ಯ ಹಾಗು 6000 ಸಾವಿರ ಮಾತೃ ಮಾಸಾಶನದ ಕುರಿತು ಮಾಹಿತಿ ನೀಡಿದರು.

ವೇದಿಕೆಯಲ್ಲಿ ನೊಡೆಲ್ ಅಧಿಕಾರಿ ವೀಣಾ ಎಂ.ಟಿ, ಕಂದಾಯ ಇಲಾಖಾಧಿಕಾರಿ, ಪಶು ಸಂಗೋಪನಾಧಿಕಾರಿ, ಮೆಸ್ಕಾಂ ಇಲಾಖಾಧಿಕಾರಿ, ಸುಳ್ಯ ತಾಲೂಕು ಪಂಚಾಯತ್ ಬಾಳಿಲ ಕ್ಷೇತ್ರದ ಸದಸ್ಯೆ ಜಾಹ್ನವಿ ಕಾಂಚೋಡು, ಬಾಳಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಹೇಮಾವತಿ ಕಾಯಾರ, ಸದಸ್ಯರಾದ ಯು.ರಾಧಾಕೃಷ್ಣ ರಾವ್, ರವೀಂದ್ರ ರೈ, ರಮೇಶ್ ರೈ ಉಪಸ್ಥಿತರಿದ್ದರು.

ವಾರ್ಷಿಕ ವರದಿಯನ್ನು ಸುಂದರ ವಾಚಿಸಿದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಚಂದ್ರಾವತಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

21 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago