Advertisement
ನಮ್ಮೂರ ಸುದ್ದಿ

ತೋಟಗಾರಿಕಾ ಇಲಾಖೆಯಲ್ಲಿ ವಿವಿಧ ಸೌಲಭ್ಯ : ಬಾಳಿಲ ಗ್ರಾಮಸಭೆಯಲ್ಲಿ ಮಾಹಿತಿ ನೀಡಿದ ಅಧಿಕಾರಿ

Share

ಬೆಳ್ಳಾರೆ: ತೋಟಗಾರಿಕಾ ಇಲಾಖೆಯಲ್ಲಿ ಕೃಷಿಕರಿಗೆ ಲಭ್ಯವಾಗುವ ವಿವಿಧ ಯೋಜನೆ, ಸಹಾಯಗಳ ಬಗ್ಗೆ ತೋಟಗಾರಿಕಾ ಇಲಾಖಾ ಅಧಿಕಾರಿ ಬಾಳಿಲ ಗ್ರಾಮ ಪಂಚಾಯತ್ ಗ್ರಾಮಸಭೆಯಲ್ಲಿ  ಮಾಹಿತಿ ನೀಡಿದರು.

ಬಾಳಿಲ ಗ್ರಾಮ ಪಂಚಾಯತ್ 2019-20ನೇ ಸಾಲಿನ ಮೊದಲ ಹಂತದ ಗ್ರಾಮಸಭೆ  ಗಿರಿಜನ ಆಶ್ರಮ ಶಾಲಾ ಸಭಾಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಿತು.

ತೋಟಗಾರಿಕಾ ಇಲಾಖಾಧಿಕಾರಿ ಮಾಹಿತಿ ನೀಡುತ್ತಾ ಬಾಳೆಕೃಷಿಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು. ಇಲಾಖೆ ವತಿಯಿಂದ ಜೇನುಪೆಟ್ಟಿಗೆಗಳನ್ನು ಮತ್ತು ಅದಕ್ಕೆ 1600 ರೂಪಾಯಿಗಳ ಭತ್ಯೆಯನ್ನು ನೀಡಲಾಗುವುದು. ಗೇರು ಕೃಷಿಗೆ ಹೆಕ್ಟೇರ್ ಒಂದಕ್ಕೆ 2800 ಭತ್ಯೆ ಹಾಗು ಗೇರು ಕೃಷಿಯಲ್ಲಿ ಎರಡುವರೆ ಹೆಕ್ಟೇರ್‍ಗೆ 25ಸಾವಿರ ಮೊದಲ ವರ್ಷಕ್ಕೆ ಅನುದಾನ ನೀಡಲಾಗುತ್ತದೆ. ಶೇ33%ಕ್ಕಿಂತ ಹೆಚ್ಚಿನ ಅಡಕೆ ಮರಗಳು ಮುರಿದ್ದಿದ್ದರೆ ಹೆಕ್ಟೇರ್‍ಗೆ 18 ಸಾವಿರ ಸಹಾಯಧನ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಫಸಲ್‍ಭೀಮಾ ಯೋಜನೆ ಕುರಿತು ಪ್ರಶ್ನಿಸಿದ್ದ ಗ್ರಾಮಸ್ಥರೊಬ್ಬರಿಗೆ ಉತ್ತರಿಸಿದ ತೋಟಗಾರಿಕಾಧಿಕಾರಿ ಹವಾಮಾನಕ್ಕನುಗುಣವಾಗಿ ಯೋಜನೆಯ ಫಲವನ್ನು ವಿತರಿಸಲಾಗುತ್ತದೆ ಎಂದರು.

ಆರೋಗ್ಯ ಇಲಾಖಾಧಿಕಾರಿ ಮಾಹಿತಿ ನೀಡುತ್ತಾ ಸಾಂಕ್ರಾಮಿಕ ರೋಗಗಳ ಕುರಿತು ಎಚ್ಚರಿಸಿದರು. ಗ್ರಾಮೀಣ ಭಾಗದಲ್ಲಿ ಹೆರಿಗೆಯಾದವರಿಗೆ ಸೌಲಭ್ಯ ಹಾಗು 6000 ಸಾವಿರ ಮಾತೃ ಮಾಸಾಶನದ ಕುರಿತು ಮಾಹಿತಿ ನೀಡಿದರು.

ವೇದಿಕೆಯಲ್ಲಿ ನೊಡೆಲ್ ಅಧಿಕಾರಿ ವೀಣಾ ಎಂ.ಟಿ, ಕಂದಾಯ ಇಲಾಖಾಧಿಕಾರಿ, ಪಶು ಸಂಗೋಪನಾಧಿಕಾರಿ, ಮೆಸ್ಕಾಂ ಇಲಾಖಾಧಿಕಾರಿ, ಸುಳ್ಯ ತಾಲೂಕು ಪಂಚಾಯತ್ ಬಾಳಿಲ ಕ್ಷೇತ್ರದ ಸದಸ್ಯೆ ಜಾಹ್ನವಿ ಕಾಂಚೋಡು, ಬಾಳಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಹೇಮಾವತಿ ಕಾಯಾರ, ಸದಸ್ಯರಾದ ಯು.ರಾಧಾಕೃಷ್ಣ ರಾವ್, ರವೀಂದ್ರ ರೈ, ರಮೇಶ್ ರೈ ಉಪಸ್ಥಿತರಿದ್ದರು.

ವಾರ್ಷಿಕ ವರದಿಯನ್ನು ಸುಂದರ ವಾಚಿಸಿದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಚಂದ್ರಾವತಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

8 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 days ago