Advertisement
ನಮ್ಮೂರ ಸುದ್ದಿ

ತೋಟಗಾರಿಕಾ ಇಲಾಖೆಯಲ್ಲಿ ವಿವಿಧ ಸೌಲಭ್ಯ : ಬಾಳಿಲ ಗ್ರಾಮಸಭೆಯಲ್ಲಿ ಮಾಹಿತಿ ನೀಡಿದ ಅಧಿಕಾರಿ

Share

ಬೆಳ್ಳಾರೆ: ತೋಟಗಾರಿಕಾ ಇಲಾಖೆಯಲ್ಲಿ ಕೃಷಿಕರಿಗೆ ಲಭ್ಯವಾಗುವ ವಿವಿಧ ಯೋಜನೆ, ಸಹಾಯಗಳ ಬಗ್ಗೆ ತೋಟಗಾರಿಕಾ ಇಲಾಖಾ ಅಧಿಕಾರಿ ಬಾಳಿಲ ಗ್ರಾಮ ಪಂಚಾಯತ್ ಗ್ರಾಮಸಭೆಯಲ್ಲಿ  ಮಾಹಿತಿ ನೀಡಿದರು.

ಬಾಳಿಲ ಗ್ರಾಮ ಪಂಚಾಯತ್ 2019-20ನೇ ಸಾಲಿನ ಮೊದಲ ಹಂತದ ಗ್ರಾಮಸಭೆ  ಗಿರಿಜನ ಆಶ್ರಮ ಶಾಲಾ ಸಭಾಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಿತು.

ತೋಟಗಾರಿಕಾ ಇಲಾಖಾಧಿಕಾರಿ ಮಾಹಿತಿ ನೀಡುತ್ತಾ ಬಾಳೆಕೃಷಿಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು. ಇಲಾಖೆ ವತಿಯಿಂದ ಜೇನುಪೆಟ್ಟಿಗೆಗಳನ್ನು ಮತ್ತು ಅದಕ್ಕೆ 1600 ರೂಪಾಯಿಗಳ ಭತ್ಯೆಯನ್ನು ನೀಡಲಾಗುವುದು. ಗೇರು ಕೃಷಿಗೆ ಹೆಕ್ಟೇರ್ ಒಂದಕ್ಕೆ 2800 ಭತ್ಯೆ ಹಾಗು ಗೇರು ಕೃಷಿಯಲ್ಲಿ ಎರಡುವರೆ ಹೆಕ್ಟೇರ್‍ಗೆ 25ಸಾವಿರ ಮೊದಲ ವರ್ಷಕ್ಕೆ ಅನುದಾನ ನೀಡಲಾಗುತ್ತದೆ. ಶೇ33%ಕ್ಕಿಂತ ಹೆಚ್ಚಿನ ಅಡಕೆ ಮರಗಳು ಮುರಿದ್ದಿದ್ದರೆ ಹೆಕ್ಟೇರ್‍ಗೆ 18 ಸಾವಿರ ಸಹಾಯಧನ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಫಸಲ್‍ಭೀಮಾ ಯೋಜನೆ ಕುರಿತು ಪ್ರಶ್ನಿಸಿದ್ದ ಗ್ರಾಮಸ್ಥರೊಬ್ಬರಿಗೆ ಉತ್ತರಿಸಿದ ತೋಟಗಾರಿಕಾಧಿಕಾರಿ ಹವಾಮಾನಕ್ಕನುಗುಣವಾಗಿ ಯೋಜನೆಯ ಫಲವನ್ನು ವಿತರಿಸಲಾಗುತ್ತದೆ ಎಂದರು.

ಆರೋಗ್ಯ ಇಲಾಖಾಧಿಕಾರಿ ಮಾಹಿತಿ ನೀಡುತ್ತಾ ಸಾಂಕ್ರಾಮಿಕ ರೋಗಗಳ ಕುರಿತು ಎಚ್ಚರಿಸಿದರು. ಗ್ರಾಮೀಣ ಭಾಗದಲ್ಲಿ ಹೆರಿಗೆಯಾದವರಿಗೆ ಸೌಲಭ್ಯ ಹಾಗು 6000 ಸಾವಿರ ಮಾತೃ ಮಾಸಾಶನದ ಕುರಿತು ಮಾಹಿತಿ ನೀಡಿದರು.

ವೇದಿಕೆಯಲ್ಲಿ ನೊಡೆಲ್ ಅಧಿಕಾರಿ ವೀಣಾ ಎಂ.ಟಿ, ಕಂದಾಯ ಇಲಾಖಾಧಿಕಾರಿ, ಪಶು ಸಂಗೋಪನಾಧಿಕಾರಿ, ಮೆಸ್ಕಾಂ ಇಲಾಖಾಧಿಕಾರಿ, ಸುಳ್ಯ ತಾಲೂಕು ಪಂಚಾಯತ್ ಬಾಳಿಲ ಕ್ಷೇತ್ರದ ಸದಸ್ಯೆ ಜಾಹ್ನವಿ ಕಾಂಚೋಡು, ಬಾಳಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಹೇಮಾವತಿ ಕಾಯಾರ, ಸದಸ್ಯರಾದ ಯು.ರಾಧಾಕೃಷ್ಣ ರಾವ್, ರವೀಂದ್ರ ರೈ, ರಮೇಶ್ ರೈ ಉಪಸ್ಥಿತರಿದ್ದರು.

ವಾರ್ಷಿಕ ವರದಿಯನ್ನು ಸುಂದರ ವಾಚಿಸಿದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಚಂದ್ರಾವತಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

5 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

12 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

14 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

14 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

20 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

1 day ago