Advertisement
ನಮ್ಮೂರ ಸುದ್ದಿ

ತೋಟಗಾರಿಕಾ ಇಲಾಖೆಯಲ್ಲಿ ವಿವಿಧ ಸೌಲಭ್ಯ : ಬಾಳಿಲ ಗ್ರಾಮಸಭೆಯಲ್ಲಿ ಮಾಹಿತಿ ನೀಡಿದ ಅಧಿಕಾರಿ

Share

ಬೆಳ್ಳಾರೆ: ತೋಟಗಾರಿಕಾ ಇಲಾಖೆಯಲ್ಲಿ ಕೃಷಿಕರಿಗೆ ಲಭ್ಯವಾಗುವ ವಿವಿಧ ಯೋಜನೆ, ಸಹಾಯಗಳ ಬಗ್ಗೆ ತೋಟಗಾರಿಕಾ ಇಲಾಖಾ ಅಧಿಕಾರಿ ಬಾಳಿಲ ಗ್ರಾಮ ಪಂಚಾಯತ್ ಗ್ರಾಮಸಭೆಯಲ್ಲಿ  ಮಾಹಿತಿ ನೀಡಿದರು.

ಬಾಳಿಲ ಗ್ರಾಮ ಪಂಚಾಯತ್ 2019-20ನೇ ಸಾಲಿನ ಮೊದಲ ಹಂತದ ಗ್ರಾಮಸಭೆ  ಗಿರಿಜನ ಆಶ್ರಮ ಶಾಲಾ ಸಭಾಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಿತು.

ತೋಟಗಾರಿಕಾ ಇಲಾಖಾಧಿಕಾರಿ ಮಾಹಿತಿ ನೀಡುತ್ತಾ ಬಾಳೆಕೃಷಿಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು. ಇಲಾಖೆ ವತಿಯಿಂದ ಜೇನುಪೆಟ್ಟಿಗೆಗಳನ್ನು ಮತ್ತು ಅದಕ್ಕೆ 1600 ರೂಪಾಯಿಗಳ ಭತ್ಯೆಯನ್ನು ನೀಡಲಾಗುವುದು. ಗೇರು ಕೃಷಿಗೆ ಹೆಕ್ಟೇರ್ ಒಂದಕ್ಕೆ 2800 ಭತ್ಯೆ ಹಾಗು ಗೇರು ಕೃಷಿಯಲ್ಲಿ ಎರಡುವರೆ ಹೆಕ್ಟೇರ್‍ಗೆ 25ಸಾವಿರ ಮೊದಲ ವರ್ಷಕ್ಕೆ ಅನುದಾನ ನೀಡಲಾಗುತ್ತದೆ. ಶೇ33%ಕ್ಕಿಂತ ಹೆಚ್ಚಿನ ಅಡಕೆ ಮರಗಳು ಮುರಿದ್ದಿದ್ದರೆ ಹೆಕ್ಟೇರ್‍ಗೆ 18 ಸಾವಿರ ಸಹಾಯಧನ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಫಸಲ್‍ಭೀಮಾ ಯೋಜನೆ ಕುರಿತು ಪ್ರಶ್ನಿಸಿದ್ದ ಗ್ರಾಮಸ್ಥರೊಬ್ಬರಿಗೆ ಉತ್ತರಿಸಿದ ತೋಟಗಾರಿಕಾಧಿಕಾರಿ ಹವಾಮಾನಕ್ಕನುಗುಣವಾಗಿ ಯೋಜನೆಯ ಫಲವನ್ನು ವಿತರಿಸಲಾಗುತ್ತದೆ ಎಂದರು.

ಆರೋಗ್ಯ ಇಲಾಖಾಧಿಕಾರಿ ಮಾಹಿತಿ ನೀಡುತ್ತಾ ಸಾಂಕ್ರಾಮಿಕ ರೋಗಗಳ ಕುರಿತು ಎಚ್ಚರಿಸಿದರು. ಗ್ರಾಮೀಣ ಭಾಗದಲ್ಲಿ ಹೆರಿಗೆಯಾದವರಿಗೆ ಸೌಲಭ್ಯ ಹಾಗು 6000 ಸಾವಿರ ಮಾತೃ ಮಾಸಾಶನದ ಕುರಿತು ಮಾಹಿತಿ ನೀಡಿದರು.

ವೇದಿಕೆಯಲ್ಲಿ ನೊಡೆಲ್ ಅಧಿಕಾರಿ ವೀಣಾ ಎಂ.ಟಿ, ಕಂದಾಯ ಇಲಾಖಾಧಿಕಾರಿ, ಪಶು ಸಂಗೋಪನಾಧಿಕಾರಿ, ಮೆಸ್ಕಾಂ ಇಲಾಖಾಧಿಕಾರಿ, ಸುಳ್ಯ ತಾಲೂಕು ಪಂಚಾಯತ್ ಬಾಳಿಲ ಕ್ಷೇತ್ರದ ಸದಸ್ಯೆ ಜಾಹ್ನವಿ ಕಾಂಚೋಡು, ಬಾಳಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಹೇಮಾವತಿ ಕಾಯಾರ, ಸದಸ್ಯರಾದ ಯು.ರಾಧಾಕೃಷ್ಣ ರಾವ್, ರವೀಂದ್ರ ರೈ, ರಮೇಶ್ ರೈ ಉಪಸ್ಥಿತರಿದ್ದರು.

ವಾರ್ಷಿಕ ವರದಿಯನ್ನು ಸುಂದರ ವಾಚಿಸಿದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಚಂದ್ರಾವತಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

1 hour ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

2 hours ago

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

7 hours ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

8 hours ago

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

11 hours ago