ಬಾಳಿಲದಲ್ಲಿ ಗ್ರಾಮಸಭೆ ನಡೆಯಿತು
ಬೆಳ್ಳಾರೆ: ತೋಟಗಾರಿಕಾ ಇಲಾಖೆಯಲ್ಲಿ ಕೃಷಿಕರಿಗೆ ಲಭ್ಯವಾಗುವ ವಿವಿಧ ಯೋಜನೆ, ಸಹಾಯಗಳ ಬಗ್ಗೆ ತೋಟಗಾರಿಕಾ ಇಲಾಖಾ ಅಧಿಕಾರಿ ಬಾಳಿಲ ಗ್ರಾಮ ಪಂಚಾಯತ್ ಗ್ರಾಮಸಭೆಯಲ್ಲಿ ಮಾಹಿತಿ ನೀಡಿದರು.
ಬಾಳಿಲ ಗ್ರಾಮ ಪಂಚಾಯತ್ 2019-20ನೇ ಸಾಲಿನ ಮೊದಲ ಹಂತದ ಗ್ರಾಮಸಭೆ ಗಿರಿಜನ ಆಶ್ರಮ ಶಾಲಾ ಸಭಾಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಿತು.
ತೋಟಗಾರಿಕಾ ಇಲಾಖಾಧಿಕಾರಿ ಮಾಹಿತಿ ನೀಡುತ್ತಾ ಬಾಳೆಕೃಷಿಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು. ಇಲಾಖೆ ವತಿಯಿಂದ ಜೇನುಪೆಟ್ಟಿಗೆಗಳನ್ನು ಮತ್ತು ಅದಕ್ಕೆ 1600 ರೂಪಾಯಿಗಳ ಭತ್ಯೆಯನ್ನು ನೀಡಲಾಗುವುದು. ಗೇರು ಕೃಷಿಗೆ ಹೆಕ್ಟೇರ್ ಒಂದಕ್ಕೆ 2800 ಭತ್ಯೆ ಹಾಗು ಗೇರು ಕೃಷಿಯಲ್ಲಿ ಎರಡುವರೆ ಹೆಕ್ಟೇರ್ಗೆ 25ಸಾವಿರ ಮೊದಲ ವರ್ಷಕ್ಕೆ ಅನುದಾನ ನೀಡಲಾಗುತ್ತದೆ. ಶೇ33%ಕ್ಕಿಂತ ಹೆಚ್ಚಿನ ಅಡಕೆ ಮರಗಳು ಮುರಿದ್ದಿದ್ದರೆ ಹೆಕ್ಟೇರ್ಗೆ 18 ಸಾವಿರ ಸಹಾಯಧನ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಫಸಲ್ಭೀಮಾ ಯೋಜನೆ ಕುರಿತು ಪ್ರಶ್ನಿಸಿದ್ದ ಗ್ರಾಮಸ್ಥರೊಬ್ಬರಿಗೆ ಉತ್ತರಿಸಿದ ತೋಟಗಾರಿಕಾಧಿಕಾರಿ ಹವಾಮಾನಕ್ಕನುಗುಣವಾಗಿ ಯೋಜನೆಯ ಫಲವನ್ನು ವಿತರಿಸಲಾಗುತ್ತದೆ ಎಂದರು.
ಆರೋಗ್ಯ ಇಲಾಖಾಧಿಕಾರಿ ಮಾಹಿತಿ ನೀಡುತ್ತಾ ಸಾಂಕ್ರಾಮಿಕ ರೋಗಗಳ ಕುರಿತು ಎಚ್ಚರಿಸಿದರು. ಗ್ರಾಮೀಣ ಭಾಗದಲ್ಲಿ ಹೆರಿಗೆಯಾದವರಿಗೆ ಸೌಲಭ್ಯ ಹಾಗು 6000 ಸಾವಿರ ಮಾತೃ ಮಾಸಾಶನದ ಕುರಿತು ಮಾಹಿತಿ ನೀಡಿದರು.
ವೇದಿಕೆಯಲ್ಲಿ ನೊಡೆಲ್ ಅಧಿಕಾರಿ ವೀಣಾ ಎಂ.ಟಿ, ಕಂದಾಯ ಇಲಾಖಾಧಿಕಾರಿ, ಪಶು ಸಂಗೋಪನಾಧಿಕಾರಿ, ಮೆಸ್ಕಾಂ ಇಲಾಖಾಧಿಕಾರಿ, ಸುಳ್ಯ ತಾಲೂಕು ಪಂಚಾಯತ್ ಬಾಳಿಲ ಕ್ಷೇತ್ರದ ಸದಸ್ಯೆ ಜಾಹ್ನವಿ ಕಾಂಚೋಡು, ಬಾಳಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಹೇಮಾವತಿ ಕಾಯಾರ, ಸದಸ್ಯರಾದ ಯು.ರಾಧಾಕೃಷ್ಣ ರಾವ್, ರವೀಂದ್ರ ರೈ, ರಮೇಶ್ ರೈ ಉಪಸ್ಥಿತರಿದ್ದರು.
ವಾರ್ಷಿಕ ವರದಿಯನ್ನು ಸುಂದರ ವಾಚಿಸಿದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಚಂದ್ರಾವತಿ ಕಾರ್ಯಕ್ರಮ ನಿರೂಪಿಸಿದರು.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…