Advertisement
ನಮ್ಮೂರ ಸುದ್ದಿ

ತೋಟಗಾರಿಕಾ ಇಲಾಖೆಯಲ್ಲಿ ವಿವಿಧ ಸೌಲಭ್ಯ : ಬಾಳಿಲ ಗ್ರಾಮಸಭೆಯಲ್ಲಿ ಮಾಹಿತಿ ನೀಡಿದ ಅಧಿಕಾರಿ

Share

ಬೆಳ್ಳಾರೆ: ತೋಟಗಾರಿಕಾ ಇಲಾಖೆಯಲ್ಲಿ ಕೃಷಿಕರಿಗೆ ಲಭ್ಯವಾಗುವ ವಿವಿಧ ಯೋಜನೆ, ಸಹಾಯಗಳ ಬಗ್ಗೆ ತೋಟಗಾರಿಕಾ ಇಲಾಖಾ ಅಧಿಕಾರಿ ಬಾಳಿಲ ಗ್ರಾಮ ಪಂಚಾಯತ್ ಗ್ರಾಮಸಭೆಯಲ್ಲಿ  ಮಾಹಿತಿ ನೀಡಿದರು.

ಬಾಳಿಲ ಗ್ರಾಮ ಪಂಚಾಯತ್ 2019-20ನೇ ಸಾಲಿನ ಮೊದಲ ಹಂತದ ಗ್ರಾಮಸಭೆ  ಗಿರಿಜನ ಆಶ್ರಮ ಶಾಲಾ ಸಭಾಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಿತು.

Advertisement

ತೋಟಗಾರಿಕಾ ಇಲಾಖಾಧಿಕಾರಿ ಮಾಹಿತಿ ನೀಡುತ್ತಾ ಬಾಳೆಕೃಷಿಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು. ಇಲಾಖೆ ವತಿಯಿಂದ ಜೇನುಪೆಟ್ಟಿಗೆಗಳನ್ನು ಮತ್ತು ಅದಕ್ಕೆ 1600 ರೂಪಾಯಿಗಳ ಭತ್ಯೆಯನ್ನು ನೀಡಲಾಗುವುದು. ಗೇರು ಕೃಷಿಗೆ ಹೆಕ್ಟೇರ್ ಒಂದಕ್ಕೆ 2800 ಭತ್ಯೆ ಹಾಗು ಗೇರು ಕೃಷಿಯಲ್ಲಿ ಎರಡುವರೆ ಹೆಕ್ಟೇರ್‍ಗೆ 25ಸಾವಿರ ಮೊದಲ ವರ್ಷಕ್ಕೆ ಅನುದಾನ ನೀಡಲಾಗುತ್ತದೆ. ಶೇ33%ಕ್ಕಿಂತ ಹೆಚ್ಚಿನ ಅಡಕೆ ಮರಗಳು ಮುರಿದ್ದಿದ್ದರೆ ಹೆಕ್ಟೇರ್‍ಗೆ 18 ಸಾವಿರ ಸಹಾಯಧನ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಫಸಲ್‍ಭೀಮಾ ಯೋಜನೆ ಕುರಿತು ಪ್ರಶ್ನಿಸಿದ್ದ ಗ್ರಾಮಸ್ಥರೊಬ್ಬರಿಗೆ ಉತ್ತರಿಸಿದ ತೋಟಗಾರಿಕಾಧಿಕಾರಿ ಹವಾಮಾನಕ್ಕನುಗುಣವಾಗಿ ಯೋಜನೆಯ ಫಲವನ್ನು ವಿತರಿಸಲಾಗುತ್ತದೆ ಎಂದರು.

ಆರೋಗ್ಯ ಇಲಾಖಾಧಿಕಾರಿ ಮಾಹಿತಿ ನೀಡುತ್ತಾ ಸಾಂಕ್ರಾಮಿಕ ರೋಗಗಳ ಕುರಿತು ಎಚ್ಚರಿಸಿದರು. ಗ್ರಾಮೀಣ ಭಾಗದಲ್ಲಿ ಹೆರಿಗೆಯಾದವರಿಗೆ ಸೌಲಭ್ಯ ಹಾಗು 6000 ಸಾವಿರ ಮಾತೃ ಮಾಸಾಶನದ ಕುರಿತು ಮಾಹಿತಿ ನೀಡಿದರು.

Advertisement

ವೇದಿಕೆಯಲ್ಲಿ ನೊಡೆಲ್ ಅಧಿಕಾರಿ ವೀಣಾ ಎಂ.ಟಿ, ಕಂದಾಯ ಇಲಾಖಾಧಿಕಾರಿ, ಪಶು ಸಂಗೋಪನಾಧಿಕಾರಿ, ಮೆಸ್ಕಾಂ ಇಲಾಖಾಧಿಕಾರಿ, ಸುಳ್ಯ ತಾಲೂಕು ಪಂಚಾಯತ್ ಬಾಳಿಲ ಕ್ಷೇತ್ರದ ಸದಸ್ಯೆ ಜಾಹ್ನವಿ ಕಾಂಚೋಡು, ಬಾಳಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಹೇಮಾವತಿ ಕಾಯಾರ, ಸದಸ್ಯರಾದ ಯು.ರಾಧಾಕೃಷ್ಣ ರಾವ್, ರವೀಂದ್ರ ರೈ, ರಮೇಶ್ ರೈ ಉಪಸ್ಥಿತರಿದ್ದರು.

ವಾರ್ಷಿಕ ವರದಿಯನ್ನು ಸುಂದರ ವಾಚಿಸಿದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಚಂದ್ರಾವತಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

9 minutes ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

2 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

3 hours ago

ಹವಾಮಾನ ವರದಿ | 04-07-2026 | ಜುಲೈ 10ರ ಬಳಿಕ ಕರ್ನಾಟಕದಲ್ಲಿ ಮುಂಗಾರು ದುರ್ಬಲ..? ಕರಾವಳಿ-ಮಲೆನಾಡಿನಲ್ಲಿ ಮಳೆ ಇಳಿಕೆಗೆ ಮುನ್ಸೂಚನೆ

ಜುಲೈ 10ರ ಬಳಿಕ ರಾಜ್ಯದಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

3 hours ago

2026ರಲ್ಲಿ ಜಗತ್ತಿನ ಅಂತ್ಯವೇ..? 1960ರ ‘ಡೂಮ್ಸ್‌ಡೇ’ ಅಧ್ಯಯನದ ನಿಜಾಂಶ ಏನು..?

1960ರ ವಿಜ್ಞಾನ ಲೇಖನವು 2026ರಲ್ಲಿ ಜಗತ್ತು ಅಂತ್ಯವಾಗುತ್ತದೆ ಎಂದು ಹೇಳಿಲ್ಲ. ಅದು ಕೇವಲ…

4 hours ago

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ

ಜುಲೈ 5ರಿಂದ 9ರವರೆಗೆ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ.…

20 hours ago