ಸುಳ್ಯ: ನಿಸರ್ಗದತ್ತ ಅಣಬೆಯನ್ನು ವೈಜ್ಞಾನಿಕ ರೀತಿಯಲ್ಲಿ ಬೆಳೆಸುವುದರಿಂದ ಆರ್ಥಿಕ ಸ್ವಾವಲಂಬನೆಯೊಂದಿಗೆ ಜೀವನಕ್ಕೆ ದಾರಿಯಾಗುತ್ತದೆ. ಅಣಬೆ ಕೃಷಿ ಜೀವನದಲ್ಲಿ ಉಪಬೆಳೆಯಾಗಿದೆ ಎಂದು ತಾ.ಪಂ ಉಪಾಧ್ಯಕ್ಷೆ ಶುಭದಾ ಎಸ್.ರೈ ಹೇಳಿದರು.
ಅವರು ತೋಟಗಾರಿಕಾ ಇಲಾಖೆ ವತಿಯಿಂದ ತಾ.ಪಂ ಯೋಜನೆಯಡಿಯಲ್ಲಿ ನಡೆಸಲಾದ ಅಣಬೆ ಕೃಷಿ ತರಬೇತಿ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ ವಹಿಸಿದ್ದರು. ವೇದಿಕೆಯಲ್ಲಿ ತಾ.ಪಂ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಕಾಸರಗೋಡು ಕೃಷಿ ವಿಜ್ಞಾನ ಕೇಂದ್ರದ ಪಾಂಡುರಂಗ ಉಪಸ್ಥಿತರಿದ್ದರು. ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಹಾನಾ ಸ್ವಾಗತಿಸಿ, ವಂದಿಸಿದರು.
ಬಳಿಕ ತರಬೇತುದಾರರಿಂದ ಅಣಬೆ ಕೃಷಿ ಕುರಿತು ತರಬೇತಿ ಹಾಗೂ ಅಣಬೆ ಬೀಜವನ್ನು ನೀಡಲಾಯಿತು. ಸುಮಾರು 50ಕ್ಕೂ ಹೆಚ್ಚು ಕೃಷಿಕರು ಭಾಗವಹಿಸಿದ್ದರು.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…