ಸುಳ್ಯ: ನಿಸರ್ಗದತ್ತ ಅಣಬೆಯನ್ನು ವೈಜ್ಞಾನಿಕ ರೀತಿಯಲ್ಲಿ ಬೆಳೆಸುವುದರಿಂದ ಆರ್ಥಿಕ ಸ್ವಾವಲಂಬನೆಯೊಂದಿಗೆ ಜೀವನಕ್ಕೆ ದಾರಿಯಾಗುತ್ತದೆ. ಅಣಬೆ ಕೃಷಿ ಜೀವನದಲ್ಲಿ ಉಪಬೆಳೆಯಾಗಿದೆ ಎಂದು ತಾ.ಪಂ ಉಪಾಧ್ಯಕ್ಷೆ ಶುಭದಾ ಎಸ್.ರೈ ಹೇಳಿದರು.
ಅವರು ತೋಟಗಾರಿಕಾ ಇಲಾಖೆ ವತಿಯಿಂದ ತಾ.ಪಂ ಯೋಜನೆಯಡಿಯಲ್ಲಿ ನಡೆಸಲಾದ ಅಣಬೆ ಕೃಷಿ ತರಬೇತಿ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ ವಹಿಸಿದ್ದರು. ವೇದಿಕೆಯಲ್ಲಿ ತಾ.ಪಂ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಕಾಸರಗೋಡು ಕೃಷಿ ವಿಜ್ಞಾನ ಕೇಂದ್ರದ ಪಾಂಡುರಂಗ ಉಪಸ್ಥಿತರಿದ್ದರು. ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಸುಹಾನಾ ಸ್ವಾಗತಿಸಿ, ವಂದಿಸಿದರು.
ಬಳಿಕ ತರಬೇತುದಾರರಿಂದ ಅಣಬೆ ಕೃಷಿ ಕುರಿತು ತರಬೇತಿ ಹಾಗೂ ಅಣಬೆ ಬೀಜವನ್ನು ನೀಡಲಾಯಿತು. ಸುಮಾರು 50ಕ್ಕೂ ಹೆಚ್ಚು ಕೃಷಿಕರು ಭಾಗವಹಿಸಿದ್ದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…