ಸುಳ್ಯ:2019-20ನೇ ಸಾಲಿನ ತಾಲ್ಲೂಕು ಪಂಚಾಯತ್ ಯೋಜನೆಯಡಿ ತೋಟಗಾರಿಕೆ ಉತ್ಪನ್ನಗಳ(ಹಣ್ಣು ಮತ್ತು ತರಕಾರಿ) ಸಂಸ್ಕರಣೆ ಮತ್ತು ಅಣಬೆ ಬೇಸಾಯದ ಬಗ್ಗೆ ತರಬೇತಿ ಕಾರ್ಯಕ್ರಮವು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾ ಭವನದಲ್ಲಿ ನಡೆಯಿತು.
ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್ ಅಧ್ಯಕ್ಷತೆ ವಹಿಸಿದ್ದರು. ಕೃಷಿಕ ಉಲ್ಲಾಸ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅನಂತ ಉರುಬೈಲು, ಸಂಪಾಜೆ ಗ್ರಾ.ಪಂ.ಉಪಾಧ್ಯಕ್ಷ ಸುಂದರ ಬಿಸಿಲುಮನೆ ಉಪಸ್ಥಿತರಿದ್ದರು.
ಸ್ವಾತಿ ಮುದ್ದಯ್ಯ, ರಮೇಶ್ ಇಪ್ಪಿಕೊಪ್ಪ, ಡಾ.ವಿಜೇತ್ ಕಾರ್ಯಾಗಾರ ನಡೆಸಿಕೊಟ್ಟರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel