ಸುಳ್ಯ: ತ್ಯಾಜ್ಯ ಎಸೆತದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯದಲ್ಲಿ ಮೊದಲ ಬಾರಿಗೆ 1000 ರೂಪಾಯಿ ದಂಡ ವಿಧಿಸಲಾಗಿದೆ. ಸಿಸಿ ಕ್ಯಾಮಾರದ ಮೂಲಕ ಸೆರೆಯಾದ ವ್ಯಕ್ತಿ ಈಗ ತ್ಯಾಜ್ಯ ಎಸೆತಕ್ಕೆ ದಂಡ ತೆರಬೇಕಾಗಿದೆ. ಎಚ್ಚರ, ಇನ್ನು ಸುಳ್ಯದಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯ, ಕಸ ಎಸೆದರೆ ದಂಡ ತೆರಬೇಕಾಗುತ್ತದೆ. ನಿಗದಿತ ಸ್ಥಳದಲ್ಲೇ ತ್ಯಾಜ್ಯ ಎಸೆಯಿರಿ.
ಅಂಬಟೆಡ್ಕ ಪ್ರದೇಶದಲ್ಲಿ ತ್ಯಾಜ್ಯ ಎಸೆಯುವ ಪ್ರಕರಣ ಹೆಚ್ಚಾಗಿತ್ತು. ಸ್ವಚ್ಛ ಮಾಡಿದರೂ ಮತ್ತೆ ಮತ್ತೆ ತ್ಯಾಜ್ಯ ಎಸೆಯುತ್ತಿದ್ದರು. ಇತ್ತೀಚೆಗಷ್ಟೇ ನಗರ ಪಂಚಾಯತ್ ಸದಸ್ಯರು ಮುಜಿವರ್ಜಿ ವಹಿಸಿ ಸ್ವಚ್ಛತೆ ಮಾಡಿದ್ದರು. ಅದಾದ ಮರುದಿನವೇ ಅದೇ ಪ್ರದೇಶದಲ್ಲಿ ತ್ಯಾಜ್ಯ ಎಸೆದಿದ್ದರು. ಹೀಗಾಗಿ ಸಿಸಿ ಕ್ಯಾಮಾರ ಅಳವಡಿಕೆ ಮಾಡಿ ತ್ಯಾಜ್ಯ ಎಸೆಯುವವರನ್ನು ಪತ್ತೆ ಮಾಡಲು ನಗರ ಪಂಚಾಯತ್ ಆಡಳಿತ ಹಾಗೂ ಸದಸ್ಯರು ನಿರ್ಧಾರ ಮಾಡಿದ್ದರು.
ಇದೀಗ ಕಾಲೇಜು ವಿದ್ಯಾರ್ಥಿಯೋರ್ವ ತ್ಯಾಜ್ಯ ಎಸೆಯುತ್ತಿರುವುದು ಸಿಸಿ ಕ್ಯಾಮಾರದಲ್ಲಿ ಪತ್ತೆಯಾಗಿದೆ. ಬಳಿಕ ವಿದ್ಯಾರ್ಥಿ ವಾಸ್ತವ್ಯ ಇರುವ ಮನೆಯವರಿಗೆ ತಿಳಿಸಿ ತ್ಯಾಜ್ಯ ಎಸೆತಕ್ಕೆ 1000 ದಂಡ ತೆರಬೇಕಾಗಿ ಬಂದಿದೆ. ಸುಳ್ಯದಲ್ಲಿ ತ್ಯಾಜ್ಯ ಕಸ ಎಸೆತಕ್ಕೆ ಇದು ಮೊದಲ ದಂಡವಾಗಿದೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…