ಧರ್ಮಸ್ಥಳ : ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ವಿಶೇಷವಾಗಿ, ವಿಭಿನ್ನವಾಗಿ ಹೊಣೆಗಾರಿಕೆಯಿಂದ ಕಾರ್ಯ ನಿರ್ವಹಿಸಿ ತಮ್ಮ ವೃತ್ತಿಯ ಘನತೆ, ಗೌರವ ಕಾಪಾಡಿಕೊಂಡಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು.
ದ.ಕ. ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜುಲೈ ಒಂದರಂದು ಮಂಗಳೂರಿನಲ್ಲಿ ನಡೆಯಲಿರುವ ಜಿಲ್ಲಾ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಅವರು ಸೋಮವಾರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಪ್ರಜ್ಞಾವಂತರಾಗಿ, ವಿಚಾರವಂತರಾಗಿ, ಬುದ್ಧಿವಂತರಾಗಿ ತಮ್ಮ ಸೃಜನಶೀಲ ವರದಿಗಾರಿಕೆಯಿಂದ ಓದುಗರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ತಾನು ಮೂರು ತಲೆಮಾರಿನ ಪತ್ರಕರ್ತರ ಕಾರ್ಯ ಶೈಲಿಯನ್ನು ಗಮನಿಸಿದ್ದು ಹೊಸ ತಲೆ ಮಾರಿನ ಪತ್ರಕರ್ತರು ಕೂಡಾ ಪ್ರಾಮಾಣಿಕವಾಗಿ ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿ ಜಿಲ್ಲಾ ಸಮ್ಮೇಳನಕ್ಕೆ ಶುಭ ಹಾರೈಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಸ್ವಾಗತ ಸಮಿತಿ ಸಂಚಾಲಕ ಜಗನ್ನಾಥ ಶೆಟ್ಟಿ ಬಾಳ, ನಗರ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕಾರ್ಯಕಾರಿ ಸಮಿತಿ ಸದಸ್ಯ ಹರೀಶ್ ಮೋಟುಕಾನ, ಬೆಳ್ತಂಗಡಿ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಆರ್.ಯನ್. ಪೂವಣಿ ಮತ್ತು ಧನಕೀರ್ತಿ ಆರಿಗ, ಧರ್ಮಸ್ಥಳ ಉಪಸ್ಥಿತರಿದ್ದರು.
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…
ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…