ಧರ್ಮಸ್ಥಳ : ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ವಿಶೇಷವಾಗಿ, ವಿಭಿನ್ನವಾಗಿ ಹೊಣೆಗಾರಿಕೆಯಿಂದ ಕಾರ್ಯ ನಿರ್ವಹಿಸಿ ತಮ್ಮ ವೃತ್ತಿಯ ಘನತೆ, ಗೌರವ ಕಾಪಾಡಿಕೊಂಡಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿದರು.
ದ.ಕ. ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜುಲೈ ಒಂದರಂದು ಮಂಗಳೂರಿನಲ್ಲಿ ನಡೆಯಲಿರುವ ಜಿಲ್ಲಾ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಅವರು ಸೋಮವಾರ ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಪ್ರಜ್ಞಾವಂತರಾಗಿ, ವಿಚಾರವಂತರಾಗಿ, ಬುದ್ಧಿವಂತರಾಗಿ ತಮ್ಮ ಸೃಜನಶೀಲ ವರದಿಗಾರಿಕೆಯಿಂದ ಓದುಗರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ತಾನು ಮೂರು ತಲೆಮಾರಿನ ಪತ್ರಕರ್ತರ ಕಾರ್ಯ ಶೈಲಿಯನ್ನು ಗಮನಿಸಿದ್ದು ಹೊಸ ತಲೆ ಮಾರಿನ ಪತ್ರಕರ್ತರು ಕೂಡಾ ಪ್ರಾಮಾಣಿಕವಾಗಿ ಹೊಣೆಗಾರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿ ಜಿಲ್ಲಾ ಸಮ್ಮೇಳನಕ್ಕೆ ಶುಭ ಹಾರೈಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಸ್ವಾಗತ ಸಮಿತಿ ಸಂಚಾಲಕ ಜಗನ್ನಾಥ ಶೆಟ್ಟಿ ಬಾಳ, ನಗರ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕಾರ್ಯಕಾರಿ ಸಮಿತಿ ಸದಸ್ಯ ಹರೀಶ್ ಮೋಟುಕಾನ, ಬೆಳ್ತಂಗಡಿ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಆರ್.ಯನ್. ಪೂವಣಿ ಮತ್ತು ಧನಕೀರ್ತಿ ಆರಿಗ, ಧರ್ಮಸ್ಥಳ ಉಪಸ್ಥಿತರಿದ್ದರು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…