ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಗಂಭೀರ ಪರಿಸ್ಥಿತಿಗೆ ತಲುಪುತ್ತಿದೆ. ಭಾನುವಾರ ಒಂದೇ ದಿನ ಮೂವರು ಮೃತಪಟ್ಟು, ಬರೋಬ್ಬರಿ 97 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 663ಕ್ಕೆ ಏರಿಕೆಯಾಗಿದೆ. ಇದರಲ್ಲಿ 422 ಮಂದಿ ಗುಣಮುಖರಾದರೆ 238 ಮಂದಿ ಚಿಕಿತ್ಸೆಯಲ್ಲಿದ್ದಾರೆ.
ಜಿಲ್ಲೆಯಲ್ಲಿ ದಿನೇ ದಿನೇ ಸೋಂಕು ಪತ್ತೆ ಸಂಖ್ಯೆ ಹೆಚ್ಚುತ್ತಿದ್ದು, ಮೂಲ ಪತ್ತೆಯಾಗದೇ ಪಾಸಿಟಿವ್ ಕಾಣಿಸಿಕೊಳ್ಳುತ್ತಿರವುದು ಕೊರೋನಾ ಸಮುದಾಯಕ್ಕೆ ಹಬ್ಬುತ್ತಿರುವ ಆತಂಕ ಉಂಟಾಗಿದೆ.
ಈ ನಡುವೆ ಭಾನುವಾರ ಸುಳ್ಯ ತಾಲೂಕಿನಲ್ಲಿ 4 ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಇದರಲ್ಲಿ ಐವರ್ನಾಡಿನ ಇಬ್ಬರು ಯುವಕರು, ಕನಕಮಜಲು ಸುಣ್ಣಮೂಲೆ ಬಳಿಯ ಮಹಿಳೆ, ಸೋಣಂಗೇರಿಯ ವೃದ್ದರೊಬ್ಬರು ಸೇರಿ 4 ಜನರಿಗೆ ಕೊರೊನಾ ಪಾಸಿಟಿವ್ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…