ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಗಂಭೀರ ಪರಿಸ್ಥಿತಿಗೆ ತಲುಪುತ್ತಿದೆ. ಭಾನುವಾರ ಒಂದೇ ದಿನ ಮೂವರು ಮೃತಪಟ್ಟು, ಬರೋಬ್ಬರಿ 97 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 663ಕ್ಕೆ ಏರಿಕೆಯಾಗಿದೆ. ಇದರಲ್ಲಿ 422 ಮಂದಿ ಗುಣಮುಖರಾದರೆ 238 ಮಂದಿ ಚಿಕಿತ್ಸೆಯಲ್ಲಿದ್ದಾರೆ.
ಜಿಲ್ಲೆಯಲ್ಲಿ ದಿನೇ ದಿನೇ ಸೋಂಕು ಪತ್ತೆ ಸಂಖ್ಯೆ ಹೆಚ್ಚುತ್ತಿದ್ದು, ಮೂಲ ಪತ್ತೆಯಾಗದೇ ಪಾಸಿಟಿವ್ ಕಾಣಿಸಿಕೊಳ್ಳುತ್ತಿರವುದು ಕೊರೋನಾ ಸಮುದಾಯಕ್ಕೆ ಹಬ್ಬುತ್ತಿರುವ ಆತಂಕ ಉಂಟಾಗಿದೆ.
ಈ ನಡುವೆ ಭಾನುವಾರ ಸುಳ್ಯ ತಾಲೂಕಿನಲ್ಲಿ 4 ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಇದರಲ್ಲಿ ಐವರ್ನಾಡಿನ ಇಬ್ಬರು ಯುವಕರು, ಕನಕಮಜಲು ಸುಣ್ಣಮೂಲೆ ಬಳಿಯ ಮಹಿಳೆ, ಸೋಣಂಗೇರಿಯ ವೃದ್ದರೊಬ್ಬರು ಸೇರಿ 4 ಜನರಿಗೆ ಕೊರೊನಾ ಪಾಸಿಟಿವ್ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…