ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 199 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು, ಎಂಟು ಮಂದಿ ಸಾವನ್ನಪ್ಪಿದ್ದಾರೆ. 90 ಮಂದಿ ಕೊರೋನಾ ಸೋಂಕು ಮುಕ್ತರಾಗಿ ಮನೆಗೆ ತೆರಳಿದ್ದಾರೆ.
ಕೊರೋನಾ ಸೋಂಕಿನೊಂದಿಗೆ ವಿವಿಧ ಕಾಯಿಲೆಯಿಂದ ಬಳಲುತ್ತಿದ್ದ ಮಂಗಳೂರು ನಿವಾಸಿಗಳಾದ 71, 72 ಹಾಗೂ 70 ವರ್ಷದ ಇಬ್ಬರು ವೃದ್ಧರು, ಪುತ್ತೂರಿನ 55 ವರ್ಷದ ವ್ಯಕ್ತಿ, ಮಂಗಳೂರಿನ 56 ವರ್ಷದ ವ್ಯಕ್ತಿ, 45 ವರ್ಷದ ಮಹಿಳೆ, 55 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ 123 ಮಂದಿ ಸಾವನ್ನಪ್ಪಿದಂತಾಗಿದೆ.
ಭಾನುವಾರ ಜಿಲ್ಲೆಯಲ್ಲಿ ಪತ್ತೆಯಾದ 199 ಪಾಸಿಟಿವ್ ಪ್ರಕರಣಗಳ ಪೈಕಿ 31 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ಕಂಡುಬಂದಿದೆ. ಸಾಮಾನ್ಯ ಶೀತ ಜ್ವರ ಪ್ರಕರಣ 73, ಉಸಿರಾಟ ಸಮಸ್ಯೆಯ 10 ಪ್ರಕರಣ ಹಾಗೂ ಒಬ್ಬರು ಅಂತಾರಾಷ್ಟ್ರೀಯ ಪ್ರಯಾಣ ಮಾಡಿದವರಲ್ಲಿ ಸೋಂಕು ಪತ್ತೆಯಾಗಿದೆ. 83 ಮಂದಿಯ ಸೋಂಕಿನ ಮೂಲವನ್ನು ಪತ್ತೆಹಚ್ಚಲಾಗುತ್ತಿದೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 4811 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 2217 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ 2471 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…
ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು, ಪೂರ್ವಭಾವಿ ತಯಾರಿ ಮಾಡಿಕೊಂಡು, ಆತ್ಮವಿಶ್ವಾಸದಿಂದ ಪರೀಕ್ಷೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.