ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 199 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು, ಎಂಟು ಮಂದಿ ಸಾವನ್ನಪ್ಪಿದ್ದಾರೆ. 90 ಮಂದಿ ಕೊರೋನಾ ಸೋಂಕು ಮುಕ್ತರಾಗಿ ಮನೆಗೆ ತೆರಳಿದ್ದಾರೆ.
ಕೊರೋನಾ ಸೋಂಕಿನೊಂದಿಗೆ ವಿವಿಧ ಕಾಯಿಲೆಯಿಂದ ಬಳಲುತ್ತಿದ್ದ ಮಂಗಳೂರು ನಿವಾಸಿಗಳಾದ 71, 72 ಹಾಗೂ 70 ವರ್ಷದ ಇಬ್ಬರು ವೃದ್ಧರು, ಪುತ್ತೂರಿನ 55 ವರ್ಷದ ವ್ಯಕ್ತಿ, ಮಂಗಳೂರಿನ 56 ವರ್ಷದ ವ್ಯಕ್ತಿ, 45 ವರ್ಷದ ಮಹಿಳೆ, 55 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ 123 ಮಂದಿ ಸಾವನ್ನಪ್ಪಿದಂತಾಗಿದೆ.
ಭಾನುವಾರ ಜಿಲ್ಲೆಯಲ್ಲಿ ಪತ್ತೆಯಾದ 199 ಪಾಸಿಟಿವ್ ಪ್ರಕರಣಗಳ ಪೈಕಿ 31 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ಕಂಡುಬಂದಿದೆ. ಸಾಮಾನ್ಯ ಶೀತ ಜ್ವರ ಪ್ರಕರಣ 73, ಉಸಿರಾಟ ಸಮಸ್ಯೆಯ 10 ಪ್ರಕರಣ ಹಾಗೂ ಒಬ್ಬರು ಅಂತಾರಾಷ್ಟ್ರೀಯ ಪ್ರಯಾಣ ಮಾಡಿದವರಲ್ಲಿ ಸೋಂಕು ಪತ್ತೆಯಾಗಿದೆ. 83 ಮಂದಿಯ ಸೋಂಕಿನ ಮೂಲವನ್ನು ಪತ್ತೆಹಚ್ಚಲಾಗುತ್ತಿದೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 4811 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 2217 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ 2471 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…