ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 199 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು, ಎಂಟು ಮಂದಿ ಸಾವನ್ನಪ್ಪಿದ್ದಾರೆ. 90 ಮಂದಿ ಕೊರೋನಾ ಸೋಂಕು ಮುಕ್ತರಾಗಿ ಮನೆಗೆ ತೆರಳಿದ್ದಾರೆ.
ಕೊರೋನಾ ಸೋಂಕಿನೊಂದಿಗೆ ವಿವಿಧ ಕಾಯಿಲೆಯಿಂದ ಬಳಲುತ್ತಿದ್ದ ಮಂಗಳೂರು ನಿವಾಸಿಗಳಾದ 71, 72 ಹಾಗೂ 70 ವರ್ಷದ ಇಬ್ಬರು ವೃದ್ಧರು, ಪುತ್ತೂರಿನ 55 ವರ್ಷದ ವ್ಯಕ್ತಿ, ಮಂಗಳೂರಿನ 56 ವರ್ಷದ ವ್ಯಕ್ತಿ, 45 ವರ್ಷದ ಮಹಿಳೆ, 55 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ 123 ಮಂದಿ ಸಾವನ್ನಪ್ಪಿದಂತಾಗಿದೆ.
ಭಾನುವಾರ ಜಿಲ್ಲೆಯಲ್ಲಿ ಪತ್ತೆಯಾದ 199 ಪಾಸಿಟಿವ್ ಪ್ರಕರಣಗಳ ಪೈಕಿ 31 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ಕಂಡುಬಂದಿದೆ. ಸಾಮಾನ್ಯ ಶೀತ ಜ್ವರ ಪ್ರಕರಣ 73, ಉಸಿರಾಟ ಸಮಸ್ಯೆಯ 10 ಪ್ರಕರಣ ಹಾಗೂ ಒಬ್ಬರು ಅಂತಾರಾಷ್ಟ್ರೀಯ ಪ್ರಯಾಣ ಮಾಡಿದವರಲ್ಲಿ ಸೋಂಕು ಪತ್ತೆಯಾಗಿದೆ. 83 ಮಂದಿಯ ಸೋಂಕಿನ ಮೂಲವನ್ನು ಪತ್ತೆಹಚ್ಚಲಾಗುತ್ತಿದೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 4811 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 2217 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ 2471 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…